February 22, 2026

Newsnap Kannada

The World at your finger tips!

shivamogga blast

ಶಿವಮೊಗ್ಗದ ಹುಣಸೋಡು ಕ್ರಷರ್‌ನಲ್ಲಿ ಸ್ಫೋಟ ಪ್ರಕರಣ: ಮತ್ತೆ ನಾಲ್ವರ ಬಂಧನ‌

Spread the love
  • ಸ್ಫೋಟಕಗಳು ಪಿ. ಶ್ರೀರಾಮುಲು ಅವರ ಮಾಲಿಕತ್ವದಲ್ಲಿರುವ ಆಂಧ್ರಪ್ರದೇಶದ ಅನಂತಪುರಂನ ಗಣೇಶ್ ಟ್ರೇಡರ್ಸ್‌ ನಿಂದ ಪೂರೈಕೆಯಾಗಿದೆ
  • ಈ ಪ್ರಕರಣದಲ್ಲಿ ಇರುವರೆಗೆ 8 ಜನರನ್ನು ಬಂಧಿಸಲಾಗಿದೆ.

ಶಿವಮೊಗ್ಗದ ಹುಣಸೋಡು ಕ್ರಷರ್‌ನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸಂಬಂಧಪಟ್ಟಂತೆ ಇನ್ನೂ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಮೀನಿನ ಮಾಲೀಕ ಶಂಕರಗೌಡ ಟಿ.ಕುಲಕರ್ಣಿ(76), ಅವಿನಾಶ್ ಕುಲಕರ್ಣಿ (43) ಹಾಗೂ ಆಂಧ್ರ ಪ್ರದೇಶದ ಅನಂತಪುರಂ ನಿವಾಸಿಗಳಾದ ಪಿ.ಶ್ರೀರಾಮಲು(68) ಪಿ.ಮಂಜುನಾಥ್ ಸಾಯಿ (36) ಎಂಬವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಎಸ್ಪಿ ಕೆ.ಎಂ‌ ಶಾಂತರಾಜು ಸುದ್ದಿಗಾರರಿಗೆ ತಿಳಿಸಿದರು.

ಪ್ರಕರಣ ಸಂಬಂಧ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ತುಂಗಾನಗರ ಠಾಣೆ ಪಿಐ ದೀಪಕ್ ಮತ್ತು ಸೊರಬ ವೃತ್ತ ಸಿಪಿಐ ಮರುಳಸಿದ್ದಪ್ಪ ಅವರು ಆಂಧ್ರ ಪ್ರದೇಶದ ಆನಂತಪುರಂಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿಸಿದರು.

ರಾಯದುರ್ಗದಲ್ಲಿ ಶ್ರೀರಾಮಲು ಅವರಿಗೆ ಸಂಬಂಧಪಟ್ಟ ಸ್ಫೋಟಕಗಳ ದಾಸ್ತಾನು ಗೋದಾಮು ಇದೆ.
ಅಲ್ಲಿ ಪರವಾನಗಿ ಪಡೆಯದೇ ಒಂದು ವಾಹನದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಅನಂತಪುರಂ ಜಿಲ್ಲೆಯ ಗುಮ್ಮಟಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಜತೆಗೆ, ಆಂಧ್ರಪ್ರದೇಶದ ಪೊಲೀಸರು ಡೆಪ್ಯೂಟಿ ಕಂಟ್ರೋಲರ್ ಆಫ್ ಎಕ್ಸ್‌ಪ್ಲೋಸಿವ್ ಈ ಬಗ್ಗೆ ವಿಶಾಖಪಟ್ಟಣಂ ಅವರಿಗೆ ಪಿ.ಶ್ರೀರಾಮುಲು ಅವರು ಲೈಸೆನ್ಸ್ ನಿಯಮವನ್ನು ಉಲ್ಲಂಘಿಸಿರುವ ಬಗ್ಗೆ ಮಾಹಿತಿ ನೀಡಿದ್ದು, ಇವರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಪ್ರಕರಣದಲ್ಲಿ ಸ್ಫೋಟವಾದ ಜಮೀನಿನ ಮಾಲಕರಾದ ಶಂಕರ್‌ಗೌಡ ಮತ್ತು ಅವಿನಾಶ್ ಅವರನ್ನು ದಾವಣಗೆರೆಯಲ್ಲಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.

ಮಹಿಳಾ ಪೊಲೀಸ್ ಠಾಣೆ ಪಿಐ ಅಭಯ್ ಪ್ರಕಾಶ್, ಗ್ರಾಮಾಂತರ ಸಿಪಿಐ ಸಂಜೀವ್ ಕುಮಾರ್, ಎಎಸ್‌ಐ ವಿಜಯ್ ತಂಡ ಖಚಿತ ಮಾಹಿತಿ ಮೇರೆಗೆ ಮುಂಬೈಗೆ ತೆರಳಿ ಅಲ್ಲಿ ಶ್ರೀರಾಮುಲು ಮತ್ತು ಮಂಜುನಾಥ್ ಎಂಬುವವರನ್ನು ಬಂಧಿಸಿದ್ದಾರೆ ಎಂದರು.

error: Content is protected !!