Main News

ಜೆಡಿಎಸ್‌ ಗೂ ಒಮ್ಮೆ ಆಶೀರ್ವಾದ ಮಾಡಿ: ಯಶಸ್ವಿಯಾಗದಿದ್ರೆ ಪಕ್ಷ ವಿಸರ್ಜಿಸುವೆ – ಕುಮಾರಸ್ವಾಮಿ

ಸ್ವತಂತ್ರವಾಗಿ 5 ವರ್ಷ ಅಧಿಕಾರ ಮಾಡಲು ಅವಕಾಶ ನೀಡಿ. ಇನ್ನೊಬ್ಬರ ಮನೆ ಬಾಗಿಲಿಗೆ ಹೋಗೋ ತರಹ ಮಾಡಬೇಡಿ ಎಂದು ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಮನವಿ ಮಾಡಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಕುಮಾರಸ್ವಾಮಿ, 5 ವರ್ಷದ ಸರ್ಕಾರ ಕೊಟ್ರೆ ಹಲವು ಯೋಜನೆ ತರುವೆ. ಒಂದು ವೇಳೆ, ನಾನು 5 ವರ್ಷದಲ್ಲಿ ಯಶಸ್ವಿಯಾಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡಿ ರಾಜ್ಯದ ಜನರಿಗೆ ಕ್ಷಮೆ ಕೇಳುವೆ. ಜನರಿಗೆ ನಿಮಗ್ಯಾರಿಗೂ ಮುಖ ತೋರಿಸಲ್ಲ. ಇನ್ನೆಂದೂ ನಿಮ್ಮ ಮುಂದೆ ಬರೋದಿಲ್ಲವೆಂದು ಕುಮಾರಸ್ವಾಮಿ ಪ್ರಕಟಿಸಿದರು.

ನಾನು ಈಗಾಗಲೇ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಕೇವಲ ಅಧಿಕಾರಕ್ಕಾಗಿ ಈ ಮಾತು ಹೇಳ್ತಿಲ್ಲ. 5 ವರ್ಷ ಅಧಿಕಾರ ನಡೆಸಲು ಕಾಂಗ್ರೆಸ್‌, ಬಿಜೆಪಿಗೆ ಅವಕಾಶ ಕೊಟ್ಟಿದ್ದೀರಿ. 5 ವರ್ಷ ಅಧಿಕಾರ ನಡೆಸಲು 2 ಪಕ್ಷಕ್ಕೆ ಅವಕಾಶ ನೀಡಿದ್ದೀರಿ. ಜೆಡಿಎಸ್ ಪಕ್ಷಕ್ಕೂ ಒಮ್ಮೆ ಆಶೀರ್ವಾದ ಮಾಡಿ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಾವು ಬಿಜೆಪಿ ಬಿ ಟೀಂ ಅಲ್ಲ, ನಾವು ಯಾರ ಹಂಗಿನಲ್ಲಿಲ್ಲ:

ನಾವು ಬಿಜೆಪಿ ಬಿ ಟೀಂ ಅಲ್ಲ. ನಾವು ಯಾರ ಹಂಗಿನಲ್ಲಿಲ್ಲ.‌ ಅಲ್ಪಸಂಖ್ಯಾತ ಬಂಧುಗಳೇ ಕಾಂಗ್ರೆಸ್​ ಪಕ್ಷವನ್ನು ನಂಬಬೇಡಿ. ನನಗೆ ಒಂದು ಅವಕಾಶ ಕೊಡಿ, ನಾನೇನು ತಪ್ಪು ಮಾಡಿದ್ದೇನೆ? ನನಗೇಕೆ ಈ ಶಿಕ್ಷೆ? ಪ್ರತಿ ಹಳ್ಳಿ ಹಳ್ಳಿಗೂ ನಾನು ಬರುತ್ತೇನೆ. ಹಳ್ಳಿಕಟ್ಟೆಯಲ್ಲಿ ಕುಳಿತು ನನಗೆ ಶಕ್ತಿಕೊಡಿ ಎಂದು ಕೇಳುತ್ತೇನೆ ಎಂದರು.

Team Newsnap
Leave a Comment
Share
Published by
Team Newsnap

Recent Posts

ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ

ಮೈಸೂರು : ಶ್ರೀನಿವಾಸ್‌ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ‌ ಮಗಳು ಪ್ರತಿಮಾ ಪ್ರಸಾದ್‌… Read More

April 29, 2024

ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು : ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More

April 29, 2024

ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್​ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More

April 29, 2024

ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ

ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More

April 28, 2024

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024