ಬೆಂಗಳೂರು : ಇತ್ತೀಚೆಗೆ ವರ್ಗಾವಣೆ ಆರೋಪ ಮಾಡಿ ಕೆ ಎಸ್ ಆರ್ ಟಿ ಸಿ ಚಾಲಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಸಿದ್ಧನು.
ಇದೀಗ ಬೆಂಗಳೂರಲ್ಲಿ ಬಿಎಂಟಿಸಿ ಚಾಲಕ /ನಿರ್ವಾಹಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನಾಗೇಶ್(45) ಎಂಬಾತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬಿಎಂಟಿಸಿ ಡಿಪೋದಲ್ಲೇ ಆತ್ಮಹತ್ಯೆಗೆ ಶರಣಾಗಿರುವ ವಿಷಯ ಬೆಳಕಿಗೆ ಬಂದಿದೆ.
ಸೋಮವಾರ ಮಧ್ಯರಾತ್ರಿಯಂದು ದೇವನಹಳ್ಳಿಯ ಬಿಎಂಟಿಸಿ ಡಿಪೋ ಮ್ಯಾನೇಜರ್ ಕೊಠಡಿ ಎದುರೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಡಿಪೋ ಮ್ಯಾನೇಜರ್ ಇಂದು ಬೆಳಗ್ಗೆ ತೆರಳಿದಾಗ ಈ ಘಟನೆ ಬೆಳಕಿಗೆ ಬಂದಿದ್ದು , ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.ನನ್ನ ವಿರುದ್ದದ- ಷಡ್ಯಂತ್ರ, ಪಿತೂರಿಗಳಿಗೆ ಯಾವುದೇ ಫಲ ದಕ್ಕುವುದಿಲ್ಲ : ಚಲುವರಾಯಸ್ವಾಮಿ
ಪೊಲೀಸರು ಪ್ರಕರಣ ದಾಖಲಿಸಿಕೊಂಡು , ಪರಿಶೀಲನೆ ನಡೆಸುತಿದ್ದಾರೆ .