ಕಳೆದ ರಾತ್ರಿ ಉತ್ತರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು 14 ಜನರು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 11.45 ರ ಸುಮಾರಿಗೆ ಮಾಣಿಕ್ ಪುರ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಯಾಣಿಕರು ತುಂಬಿಕೊಂಡಿದ್ದ ವಾಹನ ಟ್ರಕ್ಗೆ ಡಿಕ್ಕಿಯಾಗಿದೆ. ಪ್ರಯಾಗ್ ರಾಜ್-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್ಯುವಿ ಒಂದು ಟ್ರಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಎಸ್ಯುವಿದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ 11.45ರ ಸುಮಾರಿಗೆ ಮಾಣಿಕಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೇಶರಾಜ್ ಇನಾರಾ ಗ್ರಾಮದ ಸಮೀಪ ಮಹೀಂದ್ರಾ ಬೊಲೆರೊ ವಾಹನ ಮತ್ತು ನಿಲ್ಲಿಸಿದ್ದ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೊಲೆರೊದ ಮುಂಭಾಗದಲ್ಲಿದ್ದ ಪ್ರಯಾಣಿಕರು ಹಿಂಬದಿಯಿಂದ ಹೊರಗೆ ಬಿದ್ದಿದ್ದಾರೆ.
ಟೈರ್ ಪಂಕ್ಚರ್ ಆಗಿದ್ದ ಕಾರಣ ದಾರಿಯ ಬದಿಯಲ್ಲಿ ಟ್ರಕ್ ಅನ್ನು ನಿಲ್ಲಿಸಲಾಗಿತ್ತು. ವೇಗವಾಗಿ ಬಂದ ಬೊಲೆರೊ ವಾಹನ ನಿಲ್ಲಿದ್ದ ಟ್ರಕ್ಗೆ ಹಿಂದಿನಿಂದ ಗುದ್ದಿದೆ. ವಾಹನದ ಅರ್ಧದಷ್ಟು ಭಾಗ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾಗಿದೆ. ಬಳಿಕ ಅದನ್ನು ಪೊಲೀಸರು ಹೊರಗೆ ತೆಗೆದಿದ್ದಾರೆ ಎಂದು ಪ್ರತಾಪಗಡ ಎಸ್ಪಿ ಅನುರಾಗ್ ಆರ್ಯ ತಿಳಿಸಿದ್ದಾರೆ.
ಮದುವೆ ಸಮಾರಂಭವೊಂದಲ್ಲಿ ಪಾಲ್ಗೊಂಡಿದ್ದ ದುರ್ದೈವಿಗಳು ಗೊಂಡಾದಲ್ಲಿನ ತಮ್ಮ ಹಳ್ಳಿಗೆ ವಾಪಸಾಗುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ