Trending

ಬಾಲಿವುಡ್ ಖ್ಯಾತ ನಟ ಫರಾಜ್ ಖಾನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ

‘ಮೆಹಂದಿ’, ‘ಫರೆಬ್‌’ ಮುಂತಾದ ಹಿಂದಿ ಸಿನಿಮಾಗಳಲ್ಲಿ ಹೀರೋ ಆಗಿ ನಟಿಸಿದ್ದ ಫರಾಜ್‌ ಖಾನ್‌ ಬುಧವಾರ (ನ.4) ಕೊನೆಯುಸಿರೆಳೆದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಈ ಸುದ್ದಿಯನ್ನು ಬಾಲಿವುಡ್‌ ನಿರ್ದೇಶಕಿ/ನಿರ್ಮಾಪಕಿ ಪೂಜಾ ಭಟ್‌ ಖಚಿತಪಡಿಸಿದ್ದಾರೆ. ‘ಫರಾಜ್‌ ಖಾನ್‌ ನಮ್ಮೆಲ್ಲರನ್ನು ಬಿಟ್ಟುಹೋದರು ಎಂಬುದನ್ನು ತಿಳಿಸಲು ತುಂಬ ನೋವಾಗುತ್ತಿದೆ. ಅವರಿಗೆ ಅಗತ್ಯ ಇದ್ದಾಗ ಸಹಾಯ ಮಾಡಿದ ಮತ್ತು ಶುಭ ಹಾರೈಸಿದ್ದ ಎಲ್ಲರಿಗೂ ಧನ್ಯವಾದಗಳು. ಅವರ ಕುಟುಂಬದವರಿಗಾಗಿ ಪ್ರಾರ್ಥಿಸಿ. ಅವರ ಅಗಲಿಕೆಯಿಂದ ಆದ ನಷ್ಟವನ್ನು ತುಂಬಲು ಸಾಧ್ಯವಿಲ್ಲ’ ಎಂದು ಪೂಜಾ ಭಟ್‌ ಟ್ವೀಟ್‌ ಮಾಡಿದ್ದಾರೆ.

ಶ್ವಾಸಕೋಶದ ಇನ್‌ಫೆಕ್ಷನ್‌ನಿಂದ ಬಳಲುತ್ತಿರುವ ಫರಾಜ್‌ ಖಾನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಕೆಮ್ಮಿನಿಂದ ಬಳಲುತ್ತಿರುವ ಅವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು. ಕುಟುಂಬದವರ ಬಳಿ ಇದ್ದ ಹಣವೆಲ್ಲ ಖಾಲಿ ಆಗಿ, ಚಿಕಿತ್ಸೆಗಾಗಿ ಇನ್ನೂ 25 ಲಕ್ಷ ರೂ. ಬೇಕಾಗಿದೆ ಎಂದು ಫರಾಜ್‌ ಕುಟುಂಬದವರು ಮನವಿ ಮಾಡಿಕೊಂಡಿದ್ದರು. ಅದಕ್ಕೆ ಸಲ್ಮಾನ್‌ ಖಾನ್‌, ಫೂಜಾ ಭಟ್‌ ಮುಂತಾದ ಸೆಲೆಬ್ರಿಟಿಗಳು ಸ್ಪಂದಿಸಿದ್ದರು. ಕಡೆಗೂ ಫರಾಜ್‌ ಬದುಕುಳಿಯಲಿಲ್ಲ.

ಕಳೆದ 1 ವರ್ಷದಿಂದಲೂ ಫರಾಜ್‌ಗೆ ತೀವ್ರ ಕೆಮ್ಮು ಇತ್ತು. ಆಸ್ಪತ್ರೆಗೆ ದಾಖಲಿಸಿದ ಬಳಿಕ ಶ್ವಾಸಕೋಶ ಮಾತ್ರವಲ್ಲದೆ ಮಿದುಳಿನಲ್ಲಿಯೂ ಇನ್‌ಫೆಕ್ಷನ್‌ ಆಗಿರುವುದು ಗೊತ್ತಾಯಿತು. ಹಲವು ದಿನಗಳಿಂದ ಅವರು ವೆಂಟಿಲೇಟರ್‌ನಲ್ಲಿ ಇದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದರಾದರೂ ಅವರಿಗೆ ಪ್ರಜ್ಞೆ ಬಂದಿರಲಿಲ್ಲ ಎಂಬ ಮಾಹಿತಿಯನ್ನು ಫರಾಜ್‌ ಸಹೋದರ ಫಹ್ಮಾನ್‌ ಖಾನ್‌ ಹಂಚಿಕೊಂಡಿದ್ದರು

Team Newsnap
Leave a Comment
Share
Published by
Team Newsnap

Recent Posts

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024