ಬೆಂಗಳೂರು :ಸೋಮವಾರ ರಾತ್ರಿ 11:30ರ ವೇಳೆಗೆ ರಾಜಭವನಕ್ಕೆ ದುಷ್ಕರ್ಮಿಗಳು (Raj Bhavan) ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಿದ್ದಾರೆ .
ಅಪರಿಚಿತ ವ್ಯಕ್ತಿ ಬೆಂಗಳೂರಿನ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಕರೆ ಮಾಡಿದ್ದಾನೆ . ನಗರದ ಪೊಲೀಸರು ಕರೆ ಬಂದ ಕೂಡಲೇ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಕರೆ ತಂದು ರಾಜಭವನವನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ವಿಧಾನಸಭಾ ಪೊಲೀಸ್ ಠಾಣೆಯಲ್ಲಿ ಬಾಂಬ್ ಬೆದರಿಕೆ ಕರೆ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ : ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಕರೆ ಮಾಡಿದ ವ್ಯಕ್ತಿಯ ಫೋನ್ ನಂಬರ್ ಟ್ರ್ಯಾಕ್ ಮಾಡುತ್ತಿದ್ದು, ಕರೆ ಮಾಡಿದ ವ್ಯಕ್ತಿ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ .