ಬೊಮ್ಮಾಯಿ 6-7 ತಿಂಗಳು ಮಾತ್ರ ಸಿಎಂ – ಮೈಲಾರಲಿಂಗೇಶ್ವರ ಧರ್ಮಕರ್ತ ಭವಿಷ್ಯ

Team Newsnap
1 Min Read

ಬಸವರಾಜ ಬೊಮ್ಮಾಯಿ 6 ರಿಂದ 7 ತಿಂಗಳ ಕಾಲ‌ ಮಾತ್ರ ಮುಖ್ಯ ಮಂತ್ರಿಗಳಾಗಿರುತ್ತಾರೆ. ಮುಂದಿನ ಅವಧಿಗೆ ಮುಖ್ಯಮಂತ್ರಿ ಗಳಾಗಿ ಆಯ್ಕೆಯಾಗುವವರು (ಸಿ ಟಿ ರವಿ) ?ಗಡ್ಡದಾರಿಯಾಗಿರುತ್ತಾರೆ ಎಂದು ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯ ಹೇಳಿದ್ದಾರೆ.

ಹೂವಿನಹಡಗಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಒಡೆಯರ್ , ಪ್ರಸ್ತುತ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಗಳು. ಆದರೆ ಬೊಮ್ಮಾಯಿ ಅವರು 6 ರಿಂದ 7 ತಿಂಗಳ ಕಾಲ‌ ಮಾತ್ರ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ. ಇದು ಮೈಲಾರ ಭವಿಷ್ಯವಾಣಿ ಎಂದಿದ್ದಾರೆ.

ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಮುಂದಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗುವವರು ಗಡ್ಡದಾರಿಯಾಗಿರುತ್ತಾರೆ.ಬಿ ಜೆ ಪಿ ಅವಧಿಯಲ್ಲಿ ಅವರೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ. ಮೈಲಾರ ಭವಿಷ್ಯವಾಣಿಯಂತೆ ಪ್ರಸ್ತುತ ರಾಜಕಾರಣ ನಡೆಯುತ್ತಿದೆ ಎಂದು ಭವಿಷ್ಯ ಹೇಳಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಲಿದೆ ಎಂದೂ ಸಹ ತಿಳಿಸಿದರು.

Share This Article
Leave a comment