ಡಾಬಾದಲ್ಲಿ ಊಟ ಮಾಡುತ್ತಿದ್ದ ಯುವಕನನ್ನು ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಕಳೆದ ರಾತ್ರಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮ ಸಿಂಚನ ಡಾಬಾದಲ್ಲಿ ನಡೆದಿದೆ. ಕೊಪ್ಪ ಗ್ರಾಮದ ಸಾಗರ್ (25) ಹತ್ಯೆಯಾದ ಯುವಕ.
ಡಾಬಾದಲ್ಲಿ ಊಟ ಮಾಡುತ್ತಿದ್ದಾಗ ಪಕ್ಕದ ಟೇಬಲಿನಲ್ಲಿ ಗಲಾಟೆ ನಡೆಯಿತು. ಈ ವೇಳೆ ಗಲಾಟೆ ಬಿಡಿಸಲು ಸಾಗರ್ ಮಧ್ಯಪ್ರವೇಶ ಮಾಡಿದ್ದ. ಆಗ ಸಾಗರ್ ಎದೆಗೆ ಗಿರೀಶ್ ಚಾಕುವಿನಿಂದ ಚುಚ್ಚಿದ್ದಾನೆ. ತಕ್ಷಣ ಸಾಗರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಗೆ ರವಾನೆ ಮಾಡಲಾಯಿತು. ಆ ವೇಳೆ ಆತ ಕೊನೆಯುಸಿರೆಳೆದಿದ್ದನು.
ಘಟನೆ ಸಂಬಂಧಿಸಿದಂತೆ ಓರ್ವ ಆರೋಪಿ ರಾಕೇಶ್ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತಿಬ್ಬರಾದ ಗಿರೀಶ್ ಹಾಗೂ ಪ್ರತಾಪ್ ಗಾಗಿ ಶೋಧ ನಡೆಸುತ್ತಿದ್ದಾರೆ. ಕೊಪ್ಪ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಮಂಡ್ಯ : ಲಾರಿಗೆ ಕಾರು ಡಿಕ್ಕಿ – ನೆಲಮಂಗಲದ ನಾಲ್ವರು ಸಾವು
ಮಂಡ್ಯ ರೈತರಿಗೆ ಶಾಕ್ – ಹಾಲಿನ ಖರೀದಿ ದರದಲ್ಲಿ ಲೀಟರ್ಗೆ 1 ರು ಕಡಿತ
ಮಂಡ್ಯ : ಜಿಲ್ಲೆಯ ಕೊನೆ ಭಾಗದ ಬೆಳೆಗಳಿಗೆ ನೀರು ಹರಿಸಿ – ಕೃಷಿ ಸಚಿವ ಸಿ ಆರ್ ಎಸ್