ಮಹಿಳಾ ಸೆಕ್ಯುರಿಟಿ ಗಾರ್ಡ್ ಆಗಿ ಕೆಲ ಮಾಡುತ್ತಿದ್ದ ಸುಧಾರಾಣಿ ಎಂಬ ಮಹಿಳೆಯನ್ನು ಇಂದು ಬೆಳಗಾವಿ ಜಿಲ್ಲಾ ಆಸ್ಪತ್ರೆ ಕ್ಯಾಂಟೀನ್ ಬಳಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಹಡಪದ ಎಂಬ ಮಹಿಳೆ ಕೊಲೆಯಾಗಿದ್ದಾಳೆ.ಬೈಲಹೊಂಗಲದ ಆಶ್ರಯ ಕಾಲೋನಿ ನಿವಾಸಿ ಈರಣ್ಣ ಬಾಬು ಜಗಜಂಪಿ ಕೊಲೆ ಮಾಡಿದ ಆರೋಪಿ.
ಸುಧಾರಾಣಿ ತನ್ನ ಗಂಡನನ್ನು ಬಿಟ್ಟು ಸುಮಾರು ಮೂರು ವರ್ಷಗಳಿಂದ ಈರಣ್ಣ ಎಂಬಾತನ ಜೊತೆಯಲ್ಲಿ ಲಿವ್ವಿಂಗ್ ರಿಲೇಶನ್ಸ್ ಹೊಂದಿದ್ದಳು ಎನ್ನಲಾಗಿದೆ.
ಕೆಲ ದಿನಗಳಿಂದ ಈರಣ್ಣನನ್ನು ನಿರಾಕರಣೆ ಮಾಡಿ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಬಯಸಿದ್ದಳು ಎಂದು ಸಂಶಯ ಪಟ್ಟ ಈರಣ್ಣಆಗಾಗ ಈಕೆಯೊಂದಿಗೆ ಜಗಳವಾಡುತ್ತಿದ್ದನು. ಅನೇಕ ಸಲ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಇದರಿಂದ ಬೇಸರಗೊಂಡು ಸುಧಾರಾಣಿಯನ್ನು ಮಾರಕಾಸ್ತ್ರದಿಂದ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ