ಮಹಿಳಾ ಸೆಕ್ಯುರಿಟಿ ಗಾರ್ಡ್ ಆಗಿ ಕೆಲ ಮಾಡುತ್ತಿದ್ದ ಸುಧಾರಾಣಿ ಎಂಬ ಮಹಿಳೆಯನ್ನು ಇಂದು ಬೆಳಗಾವಿ ಜಿಲ್ಲಾ ಆಸ್ಪತ್ರೆ ಕ್ಯಾಂಟೀನ್ ಬಳಿ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಹಡಪದ ಎಂಬ ಮಹಿಳೆ ಕೊಲೆಯಾಗಿದ್ದಾಳೆ.ಬೈಲಹೊಂಗಲದ ಆಶ್ರಯ ಕಾಲೋನಿ ನಿವಾಸಿ ಈರಣ್ಣ ಬಾಬು ಜಗಜಂಪಿ ಕೊಲೆ ಮಾಡಿದ ಆರೋಪಿ.
ಸುಧಾರಾಣಿ ತನ್ನ ಗಂಡನನ್ನು ಬಿಟ್ಟು ಸುಮಾರು ಮೂರು ವರ್ಷಗಳಿಂದ ಈರಣ್ಣ ಎಂಬಾತನ ಜೊತೆಯಲ್ಲಿ ಲಿವ್ವಿಂಗ್ ರಿಲೇಶನ್ಸ್ ಹೊಂದಿದ್ದಳು ಎನ್ನಲಾಗಿದೆ.
ಕೆಲ ದಿನಗಳಿಂದ ಈರಣ್ಣನನ್ನು ನಿರಾಕರಣೆ ಮಾಡಿ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಬಯಸಿದ್ದಳು ಎಂದು ಸಂಶಯ ಪಟ್ಟ ಈರಣ್ಣಆಗಾಗ ಈಕೆಯೊಂದಿಗೆ ಜಗಳವಾಡುತ್ತಿದ್ದನು. ಅನೇಕ ಸಲ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಇದರಿಂದ ಬೇಸರಗೊಂಡು ಸುಧಾರಾಣಿಯನ್ನು ಮಾರಕಾಸ್ತ್ರದಿಂದ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ