ಆನ್ಲೈನ್ ಗೇಮ್ ಆಡಬೇಡ ಮಗನೇ ಎಂದು ತಾಯಿ ಹೇಳಿದ್ದಕ್ಕೆ ಬಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಓಂ ಭಾರತ್ (16) ಮೃತ ದುರ್ದೈವಿ ಬಾಲಕ ಪ್ರತಿ ಬಾರಿಯು ಆನ್ಲೈನ್ ಗೇಮ್ ಆಡುತ್ತಿದ್ದ. ಈ ಸಂದಂರ್ಭದಲ್ಲಿ ತಾಯಿ ಮೊಬೈಲ್ ಕಸಿದುಕೊಂಡು ಓದಿನ ಕಡೆ ಗಮನಹರಿಸು ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಬಾಲಕ ಮನನೊಂದು ಡೇತ್ ನೋಟ್ ಬರೆದಿದ್ದಾನೆ. ಬಳಿಕ ರೈಲಿನ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲಕನ ಪತ್ರ ನೋಡಿದ ತಾಯಿ ದಿಂಡೋಶಿ ತಕ್ಷಣವೇ ಪೊಲೀಸ್ ಠಾಣೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಪೊಲೀಸರು ಬಾಲಕನ ಹುಡುಕಾಟ ಆರಂಭಿಸಿದರು. ಆಗ ಮಲಾಡ್ ಮತ್ತು ಕಾಂಡಿವಲಿ ಸ್ಟೇಷನ್ಗಳ ನಡುವೆ ರೈಲು ಹಳಿಯ ಮೇಲೆ ಒಂದು ಮೃತದೇಹ ದೊರೆತಿರುವ ಮಾಹಿತಿ ಲಭ್ಯವಾಗುತ್ತದೆ.
ಇದನ್ನು ಓದಿ – ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ
ತಕ್ಷಣ ಅಲ್ಲಿಗೆ ತೆರಳಿ ನೋಡಿದಾಗ ಅದೇ ಬಾಲಕನೇ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬರುತ್ತದೆ. ಹೀಗಾಗಿ ಬೋರಿವಲಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!