ಆನ್ಲೈನ್ ಗೇಮ್ ಆಡಬೇಡ ಮಗನೇ ಎಂದು ತಾಯಿ ಹೇಳಿದ್ದಕ್ಕೆ ಬಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಓಂ ಭಾರತ್ (16) ಮೃತ ದುರ್ದೈವಿ ಬಾಲಕ ಪ್ರತಿ ಬಾರಿಯು ಆನ್ಲೈನ್ ಗೇಮ್ ಆಡುತ್ತಿದ್ದ. ಈ ಸಂದಂರ್ಭದಲ್ಲಿ ತಾಯಿ ಮೊಬೈಲ್ ಕಸಿದುಕೊಂಡು ಓದಿನ ಕಡೆ ಗಮನಹರಿಸು ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಬಾಲಕ ಮನನೊಂದು ಡೇತ್ ನೋಟ್ ಬರೆದಿದ್ದಾನೆ. ಬಳಿಕ ರೈಲಿನ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲಕನ ಪತ್ರ ನೋಡಿದ ತಾಯಿ ದಿಂಡೋಶಿ ತಕ್ಷಣವೇ ಪೊಲೀಸ್ ಠಾಣೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಪೊಲೀಸರು ಬಾಲಕನ ಹುಡುಕಾಟ ಆರಂಭಿಸಿದರು. ಆಗ ಮಲಾಡ್ ಮತ್ತು ಕಾಂಡಿವಲಿ ಸ್ಟೇಷನ್ಗಳ ನಡುವೆ ರೈಲು ಹಳಿಯ ಮೇಲೆ ಒಂದು ಮೃತದೇಹ ದೊರೆತಿರುವ ಮಾಹಿತಿ ಲಭ್ಯವಾಗುತ್ತದೆ.
ಇದನ್ನು ಓದಿ – ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ
ತಕ್ಷಣ ಅಲ್ಲಿಗೆ ತೆರಳಿ ನೋಡಿದಾಗ ಅದೇ ಬಾಲಕನೇ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬರುತ್ತದೆ. ಹೀಗಾಗಿ ಬೋರಿವಲಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ