Trending

ಬಿಪಿಯಲ್ಲಿ ಭಾರಿ ವ್ಯತ್ಯಾಸ : ತಲೈವಾ ರಜನಿಕಾಂತ್ ಆಸ್ಪತ್ರೆಗೆ ದಾಖಲು

ಸೂಪರ್​ಸ್ಟಾರ್​ ರಜನೀಕಾಂತ್ ಗೆ ರಕ್ತ ದೊತ್ತಡದಲ್ಲಿ ಭಾರಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಹೈದ್ರಾಬಾದ್ ನಲ್ಲಿ ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚೆನ್ನೈ ನಲ್ಲಿರುವ ಫಾರ್ಮ್​ ಹೌಸ್​ನಲ್ಲಿ ರಜನಿ ಪ್ರತ್ಯೇಕ ತಂಗಿದ್ದರು. ತಮ್ಮ ಅಭಿನಯದ ‘ಅಣ್ಣಾತ್ತೆ’ ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜೀನಿಕಾಂತ್​ ಹೋಂ ಕ್ವಾರೆಂಟೈನ್ ನಲ್ಲಿ ಇದ್ದರು.

ನಂತರ ಹೈದ್ರಾಬಾದ್ ನಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.‌ ಈ ವೇಳೆ ರಕ್ತದೊತ್ತಡದಲ್ಲಿ ಏರಿಳಿತದ ಸಮಸ್ಯೆಯಿಂದ ಹೈದ್ರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರವಷ್ಟೇ ರಜಿನಿ ಅವರಿಗೆ ಕರೊನಾ ನೆಗಟಿವ್​ ವರದಿಯಾಗಿತ್ತು.

‘ಅಣ್ಣಾತ್ತೆ’ ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಪ್ಲಾನ್​ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಚಿತ್ರೀಕರಣ ಸಹ ಸಾಕಷ್ಟು ಮುಗಿದಿತ್ತು. ಎಲ್ಲಾ ಚೆನ್ನಾಗಿ ನಡೆಯುತ್ತಿರುವಾಗ, ಚಿತ್ರತಂಡದ ನಾಲ್ವರಿಗೆ ಕರೊನಾ ಪಾಸಿಟಿವ್​ ಬಂದಿದೆ. ಹೀಗಾಗಿ ಚಿತ್ರೀಕರಣ ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ.

ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆಗಳು ನಡೆಯಲಿದೆ. ರಜನಿಕಾಂತ್​ ಅವರ ರಾಜಕೀಯ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಒಪ್ಪಿಕೊಂಡಿರುವ ‘ಅಣ್ಣಾತ್ತೆ’ ಚಿತ್ರದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸುವ ಆಲೋಚನೆ ಯಲ್ಲಿ ಇದ್ದಾರೆ.

‘ಅಣ್ಣಾತ್ತೆ’ ಚಿತ್ರದಲ್ಲಿ ರಜನಿಕಾಂತ್ ಜೊತೆಗೆ ನಯನತಾರಾ, ಖುಷ್ಬೂ, ಮೀನಾ, ಕೀರ್ತಿ ಸುರೇಶ್​ ನಟಿಸುತ್ತಿದ್ದಾರೆ. ಶಿವಾ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024