2017 ಮೇ ನಲ್ಲಿ ಸಂಘವೊಂದರ ನೊಂದಣಿ ಮಾಡಲು ಸಹಕಾರ ಅಭಿವೃದ್ದಿ ಅಧಿಕಾರಿಯೊಬ್ಬರು 7500 ರು ಲಂಚ ಸ್ವೀಕಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆ ಅಧಿಕಾರಿಗೆ 8 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ
ಇದನ್ನು ಓದಿ – ದಕ್ಷಿಣ ಪದವೀದರ ಕ್ಷೇತ್ರದ ಚುನಾವಣೆ ಮತದಾನದ ವಿವರ
20ನೇ ಬೆಂಗಳೂರು ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ(ವಿಶೇಷ. ನ್ಯಾಯಾಧೀಶರು ಭ್ರಷ್ಟಾಚಾರ ನಿಗ್ರಹ ಕಾಯ್ದೆ) ನ್ಯಾಯಾಧೀಶ ಕೆ ಲಕ್ಷ್ಮೀ ನಾರಾಯಣ ಭಟ್ ವಿಚಾರಣೆ ನಡೆಸಿ, ಆರೋಪಿ ಅಧಿಕಾರಿ ಎಚ್ ಪಿ ಸದಾಶಿವ ವಿರುದ್ದ ಈ ತೀರ್ಪು ನೀಡಿದ್ದಾರೆ
ಪ್ರಕರಣದ ವಿವರ :
ಬೆಂಗಳೂರಿನ ನಗರದ ಯಲಹಂಕ ನಿವಾಸಿಯೊಬ್ಬರು. ತಮ್ಮ ಸ್ನೇಹಿತನ ಮುಖಾಂತರ ಕೋರಮಂಗಲದ ಧನುಷ್ಶ್ರೀ ಅಪಾರ್ಟಮೆಂಟ್ ಓನರ್ಸ್ ಅಸೋಸಿಯೇಷನ್ಸ್ ಹೆಸರಿನಲ್ಲಿ ಸಂಘವನ್ನು ತೆರೆಯಲು ನೋಂದಣಿ ಮಾಡುವ ಸಲುವಾಗಿ ಚಾಮರಾಜ ಪೇಟೆಯಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದರು.
ಆರೋಪಿತ ಸರ್ಕಾರಿ ಅಧಿಕಾರಿಹೆಚ್. ಪಿ. ಸದಾಶಿವ. ಸಂಘವನ್ನು ನೋಂದಣಿ ಮಾಡಿಕೊಡುವ ಸಲುವಾಗಿ ಪಿರ್ಯಾದುದಾರರಿಗೆ 10,000 ರು ಲಂಚದ ಹಣಕ್ಕಾಗಿ ಬೇಡಿಕೆ ಇಟ್ಟರು.
ಈ ಕುರಿತಂತೆ ಬೆ೦ಗಳೂರು ನಗರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಿರುವ ದೂರು ನೀಡಿದ ನಂತರ ಲಂಚದ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿತ್ತು.
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
- ಅಗ್ನಿಪಥ್ ನೇಮಕಾತಿ ಅಗ್ನಿವೀರರ ನೌಕಾಪಡೆಯಲ್ಲಿ ಶೇ.20ರಷ್ಟು ಹುದ್ದೆ ಮಹಿಳೆಯರಿಗೆ ಮೀಸಲು
More Stories
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ