January 28, 2026

Newsnap Kannada

The World at your finger tips!

kolar, lokayukta , SDA

ಕೆರೆ ಅಭಿವೃದ್ಧಿಗೆ 60,000 ರೂ. ಲಂಚ : ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Spread the love

ಚಾಮರಾಜನಗರ: ಹನೂರು ತಾಲೂಕಿನ ಕೌದಳ್ಳಿಯಲ್ಲಿ, ಅರಣ್ಯ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಮಾಡಲು ಲಂಚ ಬೇಡಿಕೆ ಇಟ್ಟ ಆರ್‌ಎಫ್‌ಒ (ಅರಣ್ಯ ರೇಂಜ್ ಅಧಿಕಾರ) ಕಾಂತರಾಜ್ ಚೌಹಾಣ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್‌ ರೋಡ್ ಅರಣ್ಯ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಜೋಸೆಫ್ ಆಳ್ಬಗನ್‌ನಿಂದ 60,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಿದ್ದಾರೆ.

ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರನೂರು ಹುಣಸೆ ಮರ ಬಾವಿಯ ಹತ್ತಿರ 10 ಲಕ್ಷ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲು ಯೋಜನೆ ಸಲ್ಲಿಸಲಾಗಿತ್ತು. ವಲಯ ಅರಣ್ಯಾಧಿಕಾರಿ ಕಾಂತರಾಜ್ ಚೌಹಾಣ್, ಕಾಮಗಾರಿ ಪ್ರಾರಂಭಿಸಲು 80,000 ರೂ. ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು.

ಲಂಚ ಬೇಡಿಕೆಯಿಂದ ಬೇಸತ್ತ ಗ್ರಾಮ ಪಂಚಾಯಿತಿ ಸದಸ್ಯ ಜೋಸೆಫ್ ಆಳ್ಬಗನ್ ಚಾಮರಾಜನಗರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರು ವೇಳೆ, ಈಗಾಗಲೇ ಮುಂಗಡವಾಗಿ 20,000 ರೂ. ನೀಡಿದ ಮಾಹಿತಿ ನೀಡಿ, ಉಳಿದ 60,000 ರೂ. ಕೊಡುತ್ತಿದ್ದ ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.ಇದನ್ನು ಓದಿ –ಉಪಚುನಾವಣೆ: ಭರತ್‌ ಬೊಮ್ಮಾಯಿ, ಯೋಗೇಶ್ವರ್‌ ನಾಮಪತ್ರ ಸಲ್ಲಿಕೆ

ಈ ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!