February 22, 2026

Newsnap Kannada

The World at your finger tips!

manjamma

ಸಾಮಾಜಿಕ ಕಾರ್ಯಕರ್ತನಿಗೆ ಲಂಚ : ಗ್ರಾಪಂ ಸದಸ್ಯ, ಪಿಡಿಓ ಎಸಿಬಿ ಬಲೆಗೆ

Spread the love

ತಮ್ಮ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಲಂಚ ನೀಡುವಾಗ ಪಿಡಿಒ ಮಂಜಮ್ಮ ಎಸಿಬಿ ಬಲೆಗೆ ಬಿದ್ದ ಘಟನೆ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯತಿಯಲ್ಲಿ ಜರುಗಿದೆ.

ಜಟ್ಟಿ ಅಗ್ರಹಾರ ಗ್ರಾಮದ ಸಾಮಾಜಿಕ ಕಾರ್ಯಕರ್ತ ನಾಗರಾಜು ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನ ದುರುಪಯೋಗ ವಾಗಿರುವ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು.

ಈ ಕುರಿತಂತೆ ಸಿಇಒ ತನಿಖೆಗೂ ಆದೇಶಿಸಿದ್ದರಿಂದ ದೂರನ್ನು ವಾಪಸ್ ಪಡೆಯಲು ಪಿಡಿಒ ಮಂಜಮ್ಮ ಗ್ರಾಮ ಪಂಚಾಯಿತಿ ಸದಸ್ಯ ಪ್ರಭಾಕರ ಮೂಲಕ ₹1000 ನೀಡುವುದಾಗಿ ನಾಗರಾಜು ಅವರಿಗೆ ಆಮಿಷ ವೊಡ್ಡಿದ್ದರು.

ಗ್ರಾಮ ಪಂಚಾಯಿತಿ ಸದಸ್ಯರ ಮೂಲಕ ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿಗಳಾದ ಗ್ರಾಮಪಂಚಾಯಿತಿ ಸದಸ್ಯ ಪ್ರಭಾಕರ್ ಹಾಗೂ ಪಿಡಿಒ ಮಂಜಮ್ಮ ಅವರನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.‌

error: Content is protected !!