ಹೈಲೈಟ್ಸ್ –
- ಬೆಂಗಳೂರು-ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್
- ಮಂಡ್ಯದ ಇಂಡುವಾಳು ಬಳಿ ಕುಸಿದ ಸೇತುವೆ
- ಕೆರೆ ಅಂಗಳ ಸಂಪೂರ್ಣ ಜಲಾವೃತ
ರಾಜ್ಯದ ಹಲವೆಡೆ ದಿನವಿಡೀ ಸುರಿಯುತ್ತಿರುವ ಮಳೆಗೆ ಭಾರೀ ಅನಾಹುತವೇ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಂಕಷ್ಟ ಎದುರಾಗಿದೆ. ಮಂಡ್ಯದ ಇಂಡುವಾಳು ಬಳಿ ಸೇತುವೆಯೇ ಕುಸಿದು ವಾಹನ ಸವಾರರು ಪರದಾಡುವಂತೆ ಆಗಿದೆ.
ನಿನ್ನೆಯಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಡ್ಡಲಾಗಿ ನಿರ್ಮಿಸಿದ್ದ ಮಂಡ್ಯದ ಇಂಡುವಾಳು ಬಳಿ ಸೇತುವೆ ಕೊಚ್ಚಿಹೋಗಿದೆ. ಹಳ್ಳದಲ್ಲಿ ನೀರು ಹೆಚ್ಚಾದ ಕಾರಣದಿಂದ ಸೇತುವೆ ಕೊಚ್ಚಿಹೋಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿರುವ ವಾಹನ ಸವಾರರು ಹೈರಾಣಾಗಿದ್ದಾರೆ. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದು.ಮಳೆ ಹೆಚ್ಚಾದ್ರೆ ಹೆದ್ದಾರಿ ಇನ್ನಷ್ಟು ಕುಸಿಯುವ ಆತಂಕ ವ್ಯಕ್ತವಾಗಿದೆ.
ಮಂಡ್ಯದ ಕೆರೆ ಅಂಗಳ ಸಂಪೂರ್ಣ ಜಲಾವೃತಗೊಂಡಿದ್ದು, 1000 ಕ್ಕೂ ಹೆಚ್ಚು ಮನೆಗಳಿರುವ ಕಾಲೋನಿ ರಾತ್ರಿಯಿಡೀ ನೀರಿನಿಂದ ಜಲಾವೃತಗೊಂಡಿದೆ. ಊಟ, ನಿದ್ದೆ ಇಲ್ಲದೇ ಕಂಗಾಲದ ಮಕ್ಕಳು, ವೃದ್ಧರು.ಸಂಕಷ್ಟದಲ್ಲಿದ್ದಾರೆ. ಸದ್ಯ ಜನಪ್ರತಿನಿಧಿಗಳ ನೆರವಿಗೆ ಇಲ್ಲಿನ ಜನರು ಕಾಯುತ್ತಿದ್ದಾರೆ.
More Stories
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ