ಬ್ರಿಡ್ಜ್​ ಮೇಲಿಂದ ವಿ ಆರ್ ಎಲ್ ಬಸ್​ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

Team Newsnap
1 Min Read

ಜಿಲ್ಲೆಯ ದೇವಗಿರಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿದೆ.

ರಸ್ತೆ ಅಪಘಾತದಲ್ಲಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇವಗಿರಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

ಬೆಂಗಳೂರಿನಿಂದ ಗೋಕಾಕ್​ಗೆ ತೆರಳುತ್ತಿದ್ದ ವಿಆರ್​ಎಲ್​ ಬಸ್ಸೊಂದು ಬ್ರಿಡ್ಜ್​ ಮೇಲಿಂದ ಸರ್ವೀಸ್​ ರಸ್ತೆಗೆ ಪಲ್ಟಿಯಾಗಿದೆ.

ಈ ಅಪಘಾತದಲ್ಲಿ ಬಸ್​ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಹದಿನೈದು ಜನರಿಗೆ ತೀವ್ರಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್​ ಸಿಬ್ಬಂದಿಗಳು ಸೇರಿ ಕ್ರೇನ್​ ಸಹಾಯದಿಂದ ಬಸ್ಸ್ ಮೇಲಕ್ಕೆತ್ತಲಾಗಿದೆ.

ಘಟನೆ ಕುರಿತು ಪರಿಶೀಲಿಸಲು ಡಿವೈಎಸ್ಪಿ ಶಂಕರ ಮಾರಿಹಾಳ, ಸಿಪಿಐ ನಾಗಮ್ಮ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಘಟನೆ ಕುರಿತು ಹಾವೇರಿ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment