ಬಹಳಷ್ಟು ಜನ ಪ್ರಾಣಬಿಟ್ಟು ಭಾರತೀಯ ಜನತಾ ಪಕ್ಷವನ್ನು ಕಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ನಡೆದುಕೊಳ್ಳಬೇಕಾಗಿದೆ ಎಂದು, ಪಕ್ಷಕ್ಕೆ ಮತ್ತು ಮುಖಂಡರಿಗೆ ಮುಜುಗರ ಉಂಟುಮಾಡುವವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಿವಿಮಾತು ಹೇಳಿದ್ದಾರೆ.
ಪಕ್ಷ ಹಾಗೂ ಸಂಘಟನೆ ಕುರಿತು ಮಾತುಗಳನ್ನು ಆಡುವ ಶಾಸಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಿವಮೊಗ್ಗದಲ್ಲಿ ಇಂದು ಸಚಿವರು, ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಹೆಸರನ್ನು ಪ್ರಸ್ತಾಪಿಸಿದೆ ಪರೋಕ್ಷವಾಗಿ ಮಾತಿನಪೆಟ್ಟು ನೀಡಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ವಿಶ್ವನಾಥ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇತರ ಮುಖಂಡರನ್ನು ಕಟುವಾಗಿ ಟೀಕಿಸುತ್ತಿರುವ ಬಗ್ಗೆ ಈ ರೀತಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾರಿಯಲ್ಲಿ ನಿಂತುಕೊAಡು ಹೇಳಿಕೆ ನೀಡಿದರೆ ಮಂತ್ರಿಯಾಗುತ್ತೇವೆ ಎಂಬ ಭ್ರಮೆಯಲ್ಲಿ ಕೆಲವರಿದ್ದಾರೆ ಎಂದು ಕುಟುಕಿದ್ದಾರೆ. ಮಾತಾಡಲು ಸ್ವಾತಂತ್ರö್ಯವಿದೆ ಎಂದು ಏನುಬೇಕಾದರೂ ಹೇಳಲು ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ ಎಂದು ಎಚ್ಚರಿಸಿದ್ದಾರೆ.
ಮಂತ್ರಿ ಆಗಲಿಲ್ಲ ಎನ್ನುವವರು ನೀಡುವ ಹೇಳಿಕೆಗಳು ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವು ತರಬಾರದು. ಯಾರು ಮಂತ್ರಿ ಆಗಬೇಕು. ಯಾರನ್ನು ಮಾಡಬಾರದು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದರು.
ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗದ ಪರಿಣಾಮ ಗೊಂದಲ ಉಂಟಾಗಿದ್ದನ್ನು ಇಲ್ಲ ಎಂದು ಹೇಳಲಾಗದು. ಇದನ್ನು ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ತಿಳಿಸಿದ ಈಶ್ವರಪ್ಪ, ರಾಜ್ಯದಲ್ಲಿ ಮತದಾರರು ಪಕ್ಷಕ್ಕೆ ಬಹುಮತ ಕೊಡದಿರುವುದು ಒಂದು ದುರಂತ ಎಂದು ಬಣ್ಣಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಜತೆ ನಾವಿದ್ದೇವೆ ಎಂಬುದನ್ನು ರಾಜ್ಯದ ಜನತೆ ತೋರಿಸುತ್ತಿದ್ದಾರೆ ಎಂದೂ ಇದೇ ಸಂದರ್ಭದಲ್ಲಿ ಹೆಮ್ಮೆಯಿಂದ ನುಡಿದರು.
ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು ,ಇವರೆಗೂ 60 ಜನರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮಹಿಳೆಯರು… Read More
ಮೈಸೂರು : ನಗರದ ಕೂರ್ಗಳ್ಳಿಯಲ್ಲಿ ಪುತ್ರನ ಅಗಲಿಕೆ ನೋವಿನಿಂದ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ . ಭಾಗ್ಯಮ್ಮ (46)… Read More
ನವದೆಹಲಿ : ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ್ ಮಲ್ಯ (Vijay Mallya) ವಿರುದ್ಧ ಜಾಮೀನು ರಹಿತ ಬಂಧನ… Read More
ನವದೆಹಲಿ ,ಜುಲೈ 02 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. ಕೆಆರ್ ಎಸ್ ನೀರಿನ ಮಟ್ಟ 96.50… Read More
ಮೈಸೂರು : ಕರ್ನಾಟಕ ಸರ್ಕಾರವು ಕನ್ನಡ ಚಲನಚಿತ್ರೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೈಸೂರು ನಗರದಲ್ಲಿ ಅತ್ಯಾಧುನಿಕ ಫಿಲ್ಮ್ ಸಿಟಿಯನ್ನು ನಿರ್ಮಿಸಲು ನಿರ್ಧರಿಸಿದೆ.… Read More
This website uses cookies.
Leave a Comment