ಪ್ರಥಮ ಬಾರಿಗೆ ರಾಜ್ಯ ವಿಧಾನಸಭೆಯಲ್ಲಿ ನೀಡಲಾಗುತ್ತಿರುವ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಸದನದ ಹಿರಿಯ ಸದಸ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರದಾನ ಮಾಡಲಾಯಿತು.
ಲೋಕಸಭೆ ಮಾದರಿಯಲ್ಲಿ ಮೊದಲಬಾರಿಗೆ ಅತ್ಯುತ್ತಮ ಪ್ರಶಸ್ತಿ ಘೋಷಿಸಲಾಗಿದ್ದು, ಇಂದು ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ಭಾಗವಹಿಸಿದ್ದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪ ಅವರಿಗೆ ಬೆಳ್ಳಿಯ ಪ್ರಶಸ್ತಿ ಫಲಕ ಪ್ರದಾನ ಮಾಡಿದರು.
ಇದೇ ವೇಳೆ ಮಾತನಾಡಿದ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಈ ವರ್ಷದಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಕೊಡಲಾಗುತ್ತಿದೆ. ಇಂತಹ ಪ್ರಶಸ್ತಿ ಅನೇಕ ರಾಜ್ಯಗಳಲ್ಲಿದೆ. ಇದಕ್ಕೆ ಸಮಿತಿಯೂ ಇದೆ. ತಾವು ಅಧ್ಯಕ್ಷರಾಗಿದ್ದು, ಸಿದ್ದರಾಮಯ್ಯ, ಮಾಧುಸ್ವಾಮಿ, ಆರ್.ವಿ.ದೇಶಪಾಂಡೆ ಸದಸ್ಯರು ಎಂದು ವಿವರಿಸಿದರು.
ಹಲವು ಜವಾಬ್ದಾರಿಗಳನ್ನು ಹೊತ್ತವರು ಯಡಿಯೂರಪ್ಪ, ಉತ್ತಮ ಆಡಳಿತ ನೀಡಿದವರು. ರೈತ ನಾಯಕ, ಅತ್ಯುತ್ತಮ ಸಂಸದೀಯಪಟು ಎಂದು ಶ್ಲಾಘಿಸಿದರು. ಈ ವರ್ಷದಿಂದ ಹೊಸ ಸಂಪ್ರದಾಯ ಆರಂಭವಾಗಿದೆ. ಪ್ರತಿ ವರ್ಷ ಉತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ಪೀಕರ್ ಹೇಳಿದರು.
ವಿಧಾನಪರಿಷತ್ ಸಭಾಪತಿ ಬಸವರಾಜಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳು, ಬಿಜೆಪಿ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಸದಸ್ಯರು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದರು. ಜೆಡಿಎಸ್ ಸದಸ್ಯರು ಪಾಲ್ಗೊಂಡಿದ್ದರು.
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
This website uses cookies.
Leave a Comment