BSY ಅಧಿಕಾರಕ್ಕಾಗಿ ಬಿಜೆಪಿ ಬಿಡಲು ಸಿದ್ಧರಿದ್ದರು – JDS​ ಕಿಡಿ

Team Newsnap
1 Min Read

ಅಧಿಕಾರಕ್ಕಾಗಿ ಹೆಚ್.ಡಿ. ಕುಮಾರಸ್ವಾಮಿ ಯಾವ ಮುಖಂಡರ ಮನೆ ಬಾಗಿಲಿಗೂ ಬರಲಿಲ್ಲ. ಅಧಿಕಾರಕ್ಕಾಗಿ ಅವರ ಮನೆ ಬಾಗಿಲಿಗೇ ಎಲ್ಲರೂ ಬಂದಿದ್ದರು ಎಂದು ಬಿಜೆಪಿ ವಿರುದ್ಧ ಜೆಡಿಎಸ್​ ಕಿಡಿಕಾರಿದೆ

ಈ ಬಗ್ಗೆ ಟ್ವಿಟ್ ಮಾಡಿರುವ ಜೆಡಿಎಸ್​, ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು. ಮಂತ್ರಿಯಾದರೆ ಸಾಕಪ್ಪಾ ಎಂದು ಕುಮಾರಣ್ಣನ ಮನೆ ಕದತಟ್ಟಿದ್ದರು. ಆದರೆ ತಾಯಿಯಂಥ ಪಕ್ಷ ಬಿಡಬೇಡಿ ಎಂದು ಸಲಹೆ ನೀಡಿದ್ದರು. ಅಂದು ಯಡಿಯೂರಪ್ಪ ಬಿಜೆಪಿ ಬಿಟ್ಟಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಸಮಾಧಿ ಆಗುತ್ತಿತ್ತು. ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ ಎಂದು ಹೇಳಿಕೊಂಡಿದ್ದಾರೆ

9 ದಿನ ಸಿಎಂ ಆಗಿದ್ದ ಯಡಿಯೂರಪ್ಪಗೆ ಬೆಂಬಲ ಕೊಟ್ಟಿದ್ದು ಇದೇ ಕುಮಾರಸ್ವಾಮಿ. ಆಗ ನಿಮ್ಮ ಹೈಕಮಾಂಡ್, ʼಅಗ್ರಿಮೆಂಟ್ ಹೈ ಡ್ರಾಮಾʼ ಆಡಿ ಯಡಿಯೂರಪ್ಪ ಬೆನ್ನಿಗೆ ತಿವಿದದ್ದು ಗೊತ್ತಿಲ್ಲವಾ? ಕೊನೆಗೆ ಅಗ್ರಿಮೆಂಟನ್ನೇ ಹೈಜಾಕ್ ಮಾಡಿ ವಚನಭ್ರಷ್ಟರಾಗಿದ್ದು ನೀವು. ಅದನ್ನು ಕುಮಾರಸ್ವಾಮಿ ತಲೆಗೆ ಕಟ್ಟಿದಿರಿ. ಸತ್ಯ ಮರೆತರೆ ಹೇಗೆ? ಅಂತಾ ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

Share This Article
Leave a comment