ನನ್ನ ತಂದೆ ಹೇಳಿದ್ದ ಭವಿಷ್ಯ ನಿಜವಾಗಿದೆ, 4 ಬಾರಿ ಸಿಎಂ ಆಗುವ ಸೌಭಾಗ್ಯ ಸಿಕ್ಕಿದೆ. ಜೀವನದಲ್ಲಿ ತೃಪ್ತಿ ಇದೆ, ಇನ್ಯಾವುದೇ ಯಾವುದೇ ಅಪೇಕ್ಷೆಗಳಿಲ್ಲ ಎಂದು ಬೂಕನಕೆರೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಹೇಳಿದರು.
ಕೆಆರ್ ಪೇಟೆ ಬೂಕನಕೆರೆಯಲ್ಲಿ ನಡೆಯುವ ವರ್ಷಕ್ಕೊಮ್ಮೆ ಗ್ರಾಮದಲ್ಲಿ ವಿಶೇಷ ಪೂಜಾ ಕೈಂಕರ್ಯ ಇರುತ್ತದೆ. ನಾನು ಕೂಡ ಕುಟುಂಬಸ್ಥರೊಂದಿಗೆ ಬಂದು ಪೂಜೆ ಸಲ್ಲಿಸುತ್ತೇನೆ. ಇದು ಅನೇಕ ವರ್ಷಗಳ ಪದ್ದತಿ, ಅದರಂತೆ ಇಂದು ಕೂಡ ಬಂದಿದ್ದೇನೆ ಎಂದರು.
ನಾನು ಹುಟ್ಟೂರಿಗೆ ಬಂದಾಗಲೆಲ್ಲಾ ನನಗೆ ಸಂತೋಷ, ತೃಪ್ತಿ, ನೆಮ್ಮದಿ ಸಿಗುತ್ತದೆ . ನಾನು ಹುಟ್ಟಿ ಬೆಳೆದದ್ದು ಬೂಕನಕೆರೆಯಲ್ಲಿ. ಚಿಕ್ಕವಯಸ್ಸಿನಲ್ಲೇ ತಾಯಿ ಕಳೆದುಕೊಂಡೆ. ತಂದೆಯವರೆ ನಮ್ಮನ್ನೆಲ್ಲಾ ಸಾಕಿದರು.
ಬೂಕನಕೆರೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿ ಮಂಡ್ಯಕ್ಕೆ ತೆರಳಿದೆ. ಮಂಡ್ಯದಲ್ಲಿ ಹೈ ಸ್ಕೂಲ್ ಮುಗಿಸಿ ಬೆಂಗಳೂರಿಗೆ ಹೋದೆವು. ಬೂಕನಕೆರೆಯನ್ನು ಜೀವನದಲ್ಲಿ ಎಂದಿಗೂ ಮರೆಯಲಾಗಲ್ಲ ಎಂದು ಹಳೇ ದಿನಗಳನ್ನು ಸ್ಮರಿಸಿದರು.
ಈ ಮಣ್ಣಿನ ಗುಣದಿಂದ ಈ ಸ್ಥಾನಕ್ಕೆ ತಲುಪಿದ್ದೇನೆ. ಸಣ್ಣಪುಟ್ಟಕ್ಕೆ ಬಡಿದಾಡಬೇಡ ಒಳ್ಳೆಯ ಅವಕಾಶಗಳು ಸಿಗಲಿದೆ ಎಂದು ನನ್ನ ತಂದೆ ಭವಿಷ್ಯ ಹೇಳಿದ್ದರು. ನನ್ನ ತಂದೆ ಭವಿಷ್ಯ ನಿಜವಾಗಿದೆ, ನಾಲ್ಕು ಬಾರಿ ಸಿಎಂ ಆಗುವ ಸೌಭಾಗ್ಯ ಸಿಕ್ಕಿದೆ. ಜೀವನದಲ್ಲಿ ತೃಪ್ತಿ ಇದೆ, ಯಾವುದೇ ಅಪೇಕ್ಷೆಗಳಿಲ್ಲ. ಅವತ್ತಿನ ಕಾಲದ ಹಬ್ಬದ ದಿನಗಳು ಈಗ ಇಲ್ಲ. ಆಗ ಜಾತ್ರೆಗೆ ಮನೆ ಮಂದಿಯೆಲ್ಲಾ ಹೋಗುತ್ತಿದ್ದೇವು. ನಾನು, ನಮ್ಮಣ್ಣ ತೆಂಡೆಕೆರೆ ಸಂತೆಗೆ ಹೋಗಿ ವ್ಯಾಪಾರ ಮಾಡುತ್ತಿದ್ದೇವು. ಅದ್ಯಾವುದನ್ನು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ ಎಂದರು. ನಾಳೆಯಿಂದಲೇ ನಂದಿನಿ ಹಾಲು, ಮೊಸರಿನ ದರ 2 ರು ಏರಿಕೆ : ನೂತನ ಪರಿಷ್ಕೃತ ದರ ಹೀಗಿದೆ
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದೆ ನನ್ನ ಮುಂದಿನ ಗುರಿ. ಆ ಗುರಿ ಮುಟ್ಟುವ ದಿಕ್ಕಿನಲ್ಲಿ ಪ್ರಯತ್ನ ಸಾಗಿದೆ ಎಂದರು.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment