ಕೆ.ಆರ್.ಎಸ್ ಪೋಲೀಸ್ ಠಾಣಾ ವ್ಯಾಪ್ತಿಯ ಹುಲಿಕೆರೆ ಗ್ರಾಮದ ಪೋಲೀಸ್ ಮುಖ್ಯ ಪೇದೆಯೊಬ್ಬರ ಮನೆಗೆ ಹಾಡುಹಗಲೇ ಕನ್ನ ಹಾಕಿರುವ ಕಳ್ಳರು 95 ಗ್ರಾಂ ನ 3.80 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಶ್ರೀರಂಗಪಟ್ಟಣ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ರವಿ ನಿವಾಸದಲ್ಲಿ ಕಳ್ಳತನವಾಗಿದೆ ಶುಕ್ರವಾರ ಪತ್ನಿ ಜೊತೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ತೆರಳಿ, ಸಂಜೆ ವಾಪಸ್ ಬಂದಾಗ ಮನೆಯಲ್ಲಿದ್ದ ಚಿನ್ನಾಭರಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಮನೆಯ ಬಾಗಿಲು ಮತ್ತು ಬೀರುವನ್ನು ಒಡೆಯದೇ ಕೀ ಮೂಲಕವೇ ತೆರೆದು ಒಡವೆಗಳನ್ನು ಕಳ್ಳತನ ಮಾಡಲಾಗಿದೆ. ರವಿ ಆಸ್ಪತ್ರೆಗೆ ತೆರಳುವಾಗ ತಮ್ಮ ಮನೆಯ ಮುಂಬಾಗಿಲ ಕೀ ಅನ್ನು ಮನೆಯ ಮುಂದಿರುವ ಜಾಗದಲ್ಲಿ ಇಟ್ಟು ಹೋಗಿರುವುದನ್ನು ನೋಡಿರುವ ಕಳ್ಳರು ಕಳ್ಳತನ ಮಾಡಿದ್ದಾರೆ ಎಂದು ಪತ್ನಿ ಬಿಂದು ಕೆ.ಆರ್.ಸಾಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಜ್ಯದ ಶಾಲೆಗಳಲ್ಲಿ ಬಿಸಿಯೂಟ ಸಮಯ ಬದಲಾವಣೆ – ಶಿಕ್ಷಣ ಇಲಾಖೆ ಸೂಚನೆ
ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ