ಬೆಂಗಳೂರಿನಲ್ಲಿ ನಿನ್ನೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿ ಸಿಲುಕಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಮಾದೇವಿ ರಸ್ತೆಗುಂಡಿಗೆ ಬಲಿಯಾದ ಮಹಿಳೆ.
ಮಾಗಡಿ ರಸ್ತೆಯ ಸುಜಾತ ಥಿಯೇಟರ್ ಬಳಿ ಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ನಡಿ ತಾಯಿ-ಮಗಳು ಸಿಲುಕಿದ್ದಳು. ಬಸ್ ಅಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಮಗಳನ್ನು ರಾಜಾಜಿನಗರದ ಇಎಸ್ಐ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಇದನ್ನು ಓದಿ –ಮಂಡ್ಯ ಜಿಲ್ಲೆಯಲ್ಲಿ ಅನಧೀಕೃತ ಟ್ಯೂಷನ್ ಕೇಂದ್ರ ರದ್ದು – ಡಿಡಿಪಿಐ ಆದೇಶ
ಉಮಾ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಇಂದು ಬೆಳಿಗ್ಗೆ 10 ಗಂಟೆಗೆ ಮೃತದೇಹವನ್ನು ಕುಂಟಬಸ್ಥರಿಗೆ ವೈದ್ಯರು ಹಸ್ತಾಂತರ ಮಾಡಲಿದ್ದಾರೆ.
ಬಸ್ ಚಾಲಕನ ವಿರುದ್ಧ FIR – ಬಂಧನ :
ಪ್ರಕರಣ ಸಂಬಂಧ KSRTC ಬಸ್ ಚಾಲಕ ಮಾರುತಿ ರಾವ್ ಬಂಧಿಸಿದ್ದಾರೆ. ಮಲ್ಲೇಶರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಉಮಾದೇವಿ ಪುತ್ರಿ ವನಿತಾ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಮಾರುತಿ ರಾವ್ ವಿರುದ್ಧ FIR ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು