ಬೆಂಗಳೂರಿನಲ್ಲಿ ನಿನ್ನೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿ ಸಿಲುಕಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಮಾದೇವಿ ರಸ್ತೆಗುಂಡಿಗೆ ಬಲಿಯಾದ ಮಹಿಳೆ.
ಮಾಗಡಿ ರಸ್ತೆಯ ಸುಜಾತ ಥಿಯೇಟರ್ ಬಳಿ ಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ನಡಿ ತಾಯಿ-ಮಗಳು ಸಿಲುಕಿದ್ದಳು. ಬಸ್ ಅಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಮಗಳನ್ನು ರಾಜಾಜಿನಗರದ ಇಎಸ್ಐ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಇದನ್ನು ಓದಿ –ಮಂಡ್ಯ ಜಿಲ್ಲೆಯಲ್ಲಿ ಅನಧೀಕೃತ ಟ್ಯೂಷನ್ ಕೇಂದ್ರ ರದ್ದು – ಡಿಡಿಪಿಐ ಆದೇಶ
ಉಮಾ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಇಂದು ಬೆಳಿಗ್ಗೆ 10 ಗಂಟೆಗೆ ಮೃತದೇಹವನ್ನು ಕುಂಟಬಸ್ಥರಿಗೆ ವೈದ್ಯರು ಹಸ್ತಾಂತರ ಮಾಡಲಿದ್ದಾರೆ.
ಬಸ್ ಚಾಲಕನ ವಿರುದ್ಧ FIR – ಬಂಧನ :
ಪ್ರಕರಣ ಸಂಬಂಧ KSRTC ಬಸ್ ಚಾಲಕ ಮಾರುತಿ ರಾವ್ ಬಂಧಿಸಿದ್ದಾರೆ. ಮಲ್ಲೇಶರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಉಮಾದೇವಿ ಪುತ್ರಿ ವನಿತಾ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಮಾರುತಿ ರಾವ್ ವಿರುದ್ಧ FIR ದಾಖಲಾಗಿದೆ.
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
- ಜೆಡಿಎಸ್ ವಿಸರ್ಜನೆ ಪ್ರಶ್ನೆಗೆ ಎಚ್ಡಿಕೆ ಕಡಕ್ ಉತ್ತರ
- ಇಂದು ರಾಜಧಾನಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
More Stories
ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ