ಬೆಂಗಳೂರಿನಲ್ಲಿ ನಿನ್ನೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿ ಸಿಲುಕಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಮಾದೇವಿ ರಸ್ತೆಗುಂಡಿಗೆ ಬಲಿಯಾದ ಮಹಿಳೆ.
ಮಾಗಡಿ ರಸ್ತೆಯ ಸುಜಾತ ಥಿಯೇಟರ್ ಬಳಿ ಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ನಡಿ ತಾಯಿ-ಮಗಳು ಸಿಲುಕಿದ್ದಳು. ಬಸ್ ಅಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಮಗಳನ್ನು ರಾಜಾಜಿನಗರದ ಇಎಸ್ಐ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಇದನ್ನು ಓದಿ –ಮಂಡ್ಯ ಜಿಲ್ಲೆಯಲ್ಲಿ ಅನಧೀಕೃತ ಟ್ಯೂಷನ್ ಕೇಂದ್ರ ರದ್ದು – ಡಿಡಿಪಿಐ ಆದೇಶ
ಉಮಾ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಇಂದು ಬೆಳಿಗ್ಗೆ 10 ಗಂಟೆಗೆ ಮೃತದೇಹವನ್ನು ಕುಂಟಬಸ್ಥರಿಗೆ ವೈದ್ಯರು ಹಸ್ತಾಂತರ ಮಾಡಲಿದ್ದಾರೆ.
ಬಸ್ ಚಾಲಕನ ವಿರುದ್ಧ FIR – ಬಂಧನ :
ಪ್ರಕರಣ ಸಂಬಂಧ KSRTC ಬಸ್ ಚಾಲಕ ಮಾರುತಿ ರಾವ್ ಬಂಧಿಸಿದ್ದಾರೆ. ಮಲ್ಲೇಶರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತ ಉಮಾದೇವಿ ಪುತ್ರಿ ವನಿತಾ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಮಾರುತಿ ರಾವ್ ವಿರುದ್ಧ FIR ದಾಖಲಾಗಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ