ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದೆ ಚಾಮುಂಡಿಬೆಟ್ಟ ದ ಬಸ್ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.
ಗುಜರಾತ್ ನಿಂದ ಬಸ್ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಈಶ್ವರಪ್ಪಗೆ ಮತ್ತೆ ಸಂಕಷ್ಟ
ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.
- ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ
- 3.55 ಕೋಟಿ ರೂ. ಮೌಲ್ಯದ 5 ಕೆಜಿ ಚಿನ್ನಾಭರಣ ಜಪ್ತಿ
- ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಏಪ್ರಿಲ್ 1 ರಿಂದ ಹೆಚ್ಚಳ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಮುಡಾ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ
- ಮುನಿಯಪ್ಪ ವಿರುದ್ಧ ಮುನಿಸು : ಓರ್ವ ಸಚಿವರೂ ಸೇರಿದಂತೆ ಐವರು ಶಾಸಕರ ರಾಜೀನಾಮೆ ?