ತುಮಕೂರಿನಲ್ಲಿ ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ : ನಾಲ್ವರ ಸಾವು

Team Newsnap
0 Min Read

ತುಮಕೂರು ಹೊರ ವಲಯದ ಗುಬ್ಬಿ ರಸ್ತೆಯ ಸಿದ್ಧಾರ್ಥ ನಗರದ ಬಳಿ ಖಾಸಗಿ ಬಸ್- ಲಾರಿ ನಡುವೆ ಭಾನುವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮೃತರು ಗುಬ್ಬಿ ಮೂಲದ ರೈತರು ಎಂದು ಗೊತ್ತಾಗಿದೆ.

ಮಾರುಕಟ್ಟೆಯಿಂದ ಹೂವು ತುಂಬಿಕೊಂಡು ಗುಬ್ಬಿ ಕಡೆಗೆ ಹೋಗುತ್ತಿದ್ದ ಟಾಟಾ ಏಸ್‌ ಹಾಗೂ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಮೃತರನ್ನು ಟಾಟಾ ಏಸ್‌ ನಲ್ಲಿ ಹೋಗುತ್ತಿದ್ದವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಬರಬೇಕಿದೆ.

Share This Article
Leave a comment