ಬುಲ್ದಾನ :
ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಮಂದಿ ಸಜೀವ ದಹನವಾಗಿದ್ದಾರೆ. , 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ಜರುಗಿದೆ.
ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.
ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು, ಇಂದು ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್ ನದ್ದು ಬಸ್ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್ನ ಇಂಜಿನ್ನಲ್ಲಿ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬಸ್ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್ಸಿನಿಂದ ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಬುಲ್ಧಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಸುದ್ದಿ ತಿಳಿದ ಕುಟುಂಬಸ್ಥರು ಬುಲ್ಧಾನ್ನ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ