ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿ.ಟಿ.ರವಿ

Team Newsnap
1 Min Read

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿ.ಟಿ.ರವಿ ಶನಿವಾರ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪನವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಸಿ.ಟಿ.ರವಿ ಅವರು ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಗಾಂಧಿ ಜಯಂತಿಯಂದು ಸಿಎಂ ಬಿಎಸ್​ವೈ ಸಿಗದ ಕಾರಣ ನಿನ್ನೆ ಅಂದರೆ ಶನಿವಾರ ರಾಜೀನಾಮೆ ಕೊಟ್ಟಿದ್ದಾರೆ.  ಸಿ.ಟಿ.ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು. ನಿನ್ನೆ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಸಿ.ಟಿ.ರವಿ ಅವರ ರಾಜೀನಾಮೆಯನ್ನು ಸಿಎಂ ಬಿಎಸ್​ವೈ ಇನ್ನೂ ಸಹ ಅಂಗೀಕರಿಸಿಲ್ಲ.

ಇನ್ನು, ನಾಳೆ ಅಂದರೆ ಅ.5ರಂದು ಸಿ.ಟಿ.ರವಿ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸಿ.ಟಿ.ರವಿ ಭೇಟಿ ಮಾಡಲಿದ್ದಾರೆ. ಜೊತೆಗೆ ಅಕ್ಟೋಬರ್ 5 ಮತ್ತು 6ರಂದು ದೆಹಲಿಯಲ್ಲಿ ಪಕ್ಷದ ಸಂಘಟನಾ ಸಭೆ ಇದೆ. ಈ ಸಭೆಯಲ್ಲೂ ಸಹ ಸಿ.ಟಿ.ರವಿ ಅವರು ಪಾಲ್ಗೊಳ್ಳಲಿದ್ದಾರೆ.

Share This Article
Leave a comment