ಸಾಲು ಸಾಲು ಚುನಾವಣೆ, ಡಿಸೆಂಬರ್ ನಲ್ಲಿ ಅಧಿವೇಶನ ಇರುವ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರ್ಧಾರದಿಂದ ಸಧ್ಯಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಸುಳಿವು ನೀಡಿದ ಬೊಮ್ಮಾಯಿ ಸಧ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಪ್ರಸ್ತಾವನೆ ಇಲ್ಲ. ಡಿಸೆಂಬರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಇದೆ. ಅದಿವೇಶನ ಅದೇ ತಿಂಗಳು ನಡೆಯುವುದರಿಂದ ವಿಸ್ತರಣೆ ಮಾತುಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸೂಚ್ಯವಾಗಿ ಸಿಎಂ ಹೇಳಿದರು.
ವಿಧಾನ ಪರಿಷತ್ ಚುನಾವಣೆ, ಅಧಿವೇಶನ ಮುಗಿದ ಬಳಿಕ ಜಿಪಂ ತಾಪಂ ಚುನಾವಣೆಗಳು ನಡೆಯಲಿವೆ. ಅಲ್ಲದೇ ಬಿಬಿಎಂಪಿ ಚುನಾವಣೆ ಕೂಡ ನಡೆಸಬೇಕಿದೆ ಎನ್ನುವುದು ಸಂಪುಟ ವಿಸ್ತರಣೆಗೆ ತೊಡಕಾಗಿರುವ ಅಂಶಗಳಾಗಿವೆ ಎಂದು ಹೇಳಲಾಗಿದೆ
ಚುನಾವಣೆಗಳನ್ನು ಮುಂದಿಟ್ಟುಕೊಂಡು ವಿಸ್ತರಣೆಗೆ ಕೈ ಹಾಕಿದರೆ ಅತೃಪ್ತರಿಂದ ಪಕ್ಷಕ್ಕೆ ಸಾಕಷ್ಟು ಹಿನ್ನಡೆಯಾಗಲಿದೆ ಎಂಬ ಅಂಶವನ್ನೂ ಕೂಡ ಗಮನದಲ್ಲಿಟ್ಟುಕೊಳ್ಳಬೇಕಾಗಿರುವುದರಿಂದ ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎನ್ನಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ