Trending

ಸಂಪುಟ ವಿಸ್ತರಣೆ- ಪುನರ್ ರಚನೆ ಡೌಟು : ಡಿ 15 ರವರೆಗೆ ವೇಟ್ – ಈಗ ಸಂತೋಷ್ ರಾಜೀನಾಮೆ?

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಲೆಕ್ಕಾಚಾರ ಎಲ್ಲವೂ ಉಲ್ಟಾ ಆಗುತ್ತಿದೆ.

ಸಿಎಂ ಯಡಿಯೂರಪ್ಪ ಅಂದುಕೊಂಡಂತೆ ಯಾವುದನ್ನೂ ನಡೆಯಲು ಬಿಜೆಪಿ ಹೈಕಮಾಂಡ್ ಬಿಡದೇ ಇರುವುದು ಸಿಎಂಗೆ ಬಿಸಿ ತುಪ್ಪದಂತೆ ಆಗಿದೆ.

ಸಧ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಯಾವುದೂ ಬೇಡ ಎನ್ನುವ ನಿರ್ಧಾರಕ್ಕೆ ಬಂದಿರುವ ಹೈಕಮಾಂಡ್ ಡಿ 15 ರವರೆಗೆ ಯಾವುದೇ ಕಾಯುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಹೈಕಮಾಂಡ್ ನಿಂದ ಇಂತಹ ಸಂದೇಶ ರವಾನೆಯಾಗುತ್ತಿದ್ದಂತೆ ಸಚಿವ ಆಕಾಂಕ್ಷಿಗಳು ತಳಮಳಗೊಂಡಿದ್ದಾರೆ. ಮುಂದಿನ ದಾರಿ ಕಾಣದೇ ಆಕಾಂಕ್ಷಿಗಳ ದಂಡು ಸಿಎಂ ಭೇಟಿಗೆ ದೌಡಾಯಿಸಿ ಬಂದು ಚರ್ಚೆಯಲ್ಲಿ ತೊಡಗಿದ್ದಾರೆ.

ಈ ನಡುವೆ ಡಿ 7 ರಿಂದ 15 ರವರೆಗೆ ವಿಧಾನ ಸಭೆಯ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನ ಮುಗಿದ ನಂತರವೇ ಮತ್ತೆ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಗೆ ಚಾಲನೆ ಸಿಗಬಹುದು. ಅಲ್ಲಿಯವರೆಗೂ ಕಾಯಲೇಬೇಕು.

ಸಂತೋಷ್ ರಾಜೀನಾಮೆ?

ಸಿಎಂ ಯಡಿಯೂರಪ್ಪ ಅವರ ಪರಮ ಆಪ್ತ , ರಾಜಕೀಯ ಕಾರ್ಯದರ್ಶಿ ಸಂತೋಷ್ ರಾಜೀನಾಮೆ ನೀಡುವಂತೆ ಸಿಎಂ ಖಡಕ್ ಸಂದೇಶ ನೀಡಿದ್ದಾರೆಂದು ಗೊತ್ತಾಗಿದೆ.

ನೀನಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡು ಇಲ್ಲದೇ ಹೋದರೆ ಕಿತ್ತು ಹಾಕುತ್ತೇನೆ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆಂದು ಹೇಳಲಾಗಿದೆ.

ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆಂಬ ಆರೋಪಕ್ಕೆ ಗುರಿಯಾಗಿದ್ದ ಮತ್ತೊಬ್ಬ ರಾಜಕೀಯ ಕಾರ್ಯದರ್ಶಿ, ಹಿರಿಯ ಪತ್ರಕರ್ತ ಎಂ. ಬಿ. ಮರಮಕಲ್ ಅವರನ್ನು ಪದಚ್ಯುತ ಗೊಳಿಸಲಾಗಿದೆ. ಅಲ್ಲದೇ ಸಿಎಂ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ರಾಜೀನಾಮೆ ನೀಡಿ ಯಡಿಯೂರಪ್ಪನವರ ಆಪ್ತ‌ ವಲಯದಿಂದ ಹೊರ ಬಂದಿದ್ದಾರೆ.

ಈಗ ಆಪ್ತ ಸಂತೋಷ ಅವರ ಹುದ್ದೆಗೂ ಕುತ್ತು ಬಂದಿದೆ. ಇದರೊಂದಿಗೆ ಯಡಿಯೂರಪ್ಪ ನವರ ಆಡಳಿತಕ್ಕೆ ಗ್ರಹಣ ಶುರುವಾಗಿದೆ ಅಥವಾ ಸಿಎಂ ಅವರನ್ನು ದುರ್ಬಲಗೊಳಿಸುವ ತಂತ್ರಗಳು ಆರಂಭವಾಗಿವೆ ಎನ್ನುವುದನ್ನು ಊಹಿಸಬಹುದಾಗಿದೆ.

Team Newsnap
Leave a Comment
Share
Published by
Team Newsnap

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024