ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ಮಾ 26 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆ ಬಂದ್ ಗೆ ಕರೆ ನೀಡಿದ್ದು
ರೈತ, ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದೆ
ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆಯಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನದಲ್ಲಿ ನಡೆದ ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿ ಮಾರ್ಚ್ 26 ರ ಕರ್ನಾಟಕ ಬಂದ್ ಗೆ ನಿರ್ಣಯ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಅಖಿಲ ಭಾರತ್ ಕಿಸಾನ್ ಸಂಯುಕ್ತ ಮೋರ್ಚಾ ಮಾರ್ಚ್ 26 ರಂದು ಭಾರತ್ ಬಂದ್ ಘೋಷಿಸಿದೆ.
ಈ ನಿರ್ಧಾರ ಬೆಂಬಲಿಸಿ ಮಾರ್ಚ್ 26 ರಂದು ಕರ್ನಾಟಕ ಬಂದ್ ಮಾಡುವ ನಿರ್ಣಯ ಕೈಗೊಳ್ಳಲಾಗಿದೆ. ಈ ಕುರಿತಂತೆ ಬೇರೆ ಯಾವ ಸಂಘಟನೆ ಗಳು ಸ್ಷಪ್ಟ ನಿರ್ಧಾರ ಕೈಗೊಂಡಿಲ್ಲ.