ಆನೆ ಹೋಗುತ್ತಿದ್ದಾಗ ನಾಯಿ ಬೊಗಳಿದರೆ ಏನಾಗುತ್ತೆ? ನಾಯಿಗಳಿಗೆ ಉತ್ತರ ಕೊಡಲು ಸಾಧ್ಯನಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಶಾಸಕ ಜಮೀರ್ ಅಹ್ಮದ್ಗೆ ತಿರುಗೇಟು ನೀಡಿದ್ದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಆನೆ ಹೋಗುತ್ತಿದ್ದರೆ ನಾಯಿ ಬೊಗಳಿದರೆ ಏನಾಗುತ್ತದೆ? ಏನು ಆಗಲ್ಲ. ಆನೆ ದಾರಿ ಆನೆಗೆ. ಜಮೀರ್ ಟೀಕೆಗೆ ಉತ್ತರ ಕೊಡಲು ಅನ್ ಫಿಟ್ ಎಂದು ಜಮೀರ್ರನ್ನು ನಾಯಿಗೆ ಹೋಲಿಸಿದ್ದಾರೆ.
ನಾನು ಸ್ವತಃ ದುಡಿಮೆ ಮಾಡಿ ಬದುಕು ಕಟ್ಟಿಕೊಂಡಿದ್ದಾನೆ. ಇವರಿಗೆಲ್ಲಾ ನನ್ನ ಬ್ಯಾಕ್ ಗ್ರೌಂಡ್ ಏನೂ ಗೊತ್ತಿದೆ. ಇವರೆಲ್ಲಾ ಅವತ್ತು ಎಲ್ಲಿದ್ದರು ಎಂದು ಪ್ರಶ್ನೆ ಮಾಡಿದರು.
ಓದುವಾಗ ಕಸದ ಟೆಂಡರ್ ಪಡೆದು ದುಡಿಮೆ ಮಾಡುತ್ತಿದ್ದೆ. ಚಿತ್ರದ ಹಂಚಿಕೆದಾರನಾಗಿ ದುಡಿಮೆ ಮಾಡಿದ್ದೇನೆ. ಬಡ್ಡಿಗೆ ದುಡ್ಡು ಪಡೆದು ಚಿತ್ರ ಪಡೆದು ಸಿನಿಮಾ ಹಂಚಿಕೆ ಮಾಡುತ್ತಿದ್ದೆ. ದೇವೇಗೌಡರ ಹೆಸರಿನಿಂದ ನೂರು ಪಟ್ಟು ಹಣ ಸಂಪಾದಿಸಬಹುದಿತ್ತು. ನಾನು ಆ ಕೆಲಸ ಮಾಡಲಿಲ್ಲ ಎಂದರು.
ವಿಧಾನಸೌಧದಲ್ಲಿ ಯಾವ ಕೆಲಸ ಆಗುತ್ತಿಲ್ಲ. ಎಲ್ಲರೂ ಉಪ ಚುನಾವಣೆಯಲ್ಲಿ ತೊಡಗಿದ್ದಾರೆ. ಜನರ ಸಮಸ್ಯೆ ಮರೆತು ಎಲ್ಲಾ ಮಂತ್ರಿಗಳನ್ನು ಚುನಾವಣೆಗೆ ನಿಯೋಜಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ಗುಡುಗಿದರು.
ಜೆಡಿಎಸ್ನಲ್ಲಿ ದೊಡ್ಡ ನಾಯಕರಿಲ್ಲ. ನಮ್ಮಲ್ಲಿ ಕಾರ್ಯಕರ್ತರೆ ನಾಯಕರು. ನಾಳೆ ಪುನಃ ಹಾನಗಲ್, ಸಿಂಧಗಿಗೆ ಹೋಗುತ್ತೇನೆ. ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದ ಪ್ರತಿಫಲವಾಗಿ ಜೆಡಿಎಸ್ ನೆಲಕಚ್ಚಿತು. ನಮ್ಮ ಪಕ್ಷಕ್ಕೆ ದೊಡ್ಡ ಅನಾಹುತಗಳೇ ಆದವು ಎಂದರು.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment