ಆರ್ಥಿಕವಾಗಿ ಸದೃಢವಾಗಿದ್ದರೂ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. 94 ಸಾವಿರಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡಗಳನ್ನು ರದ್ದುಪಡಿಸಲಾಗಿದೆ. ಪರಿಣಾಮ ಸರಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ಉಳಿತಾಯವಾಗಿದೆ.
ಹೆಚ್ಚಿನ ಸಂಖ್ಯೆಯ ಜನರು ಆರ್ಥಿಕವಾಗಿ ಸದೃಢವಾಗಿದ್ದರೂ ಬಿಪಿಎಲ್ ಕಾರ್ಡ್ ಪಡೆದುಕೊಂಡು ಉಚಿತವಾಗಿ ಪಡಿತರ ಪಡೆಯುತ್ತಿದ್ದಾರೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತಿದೆ. ಅದನ್ನು ತಡೆಯುವ ಉದ್ದೇಶದಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ಪಡೆದ ಅನರ್ಹರ ಪತ್ತೆಗೆ ಮುಂದಾಗಿತ್ತು.
ಇಲಾಖೆ ಪಡಿತರ ಚೀಟಿ ಹಿಂತಿರುಗಿಸುವಂತಹ ಅವಧಿಯಲ್ಲಿ ಎರಡು ಮೂರು ಬಾರಿ ವಿಸ್ತರಿಸಿತ್ತು. ಅದಾದ ಬಳಿಕವೂ ಹೆಚ್ಚಿನ ಸಂಖ್ಯೆ ಜನರು ಹಿಂತಿರುಗಿಸಲು ಮುಂದಾಗದ ಹಿನ್ನೆಲೆಯಲ್ಲಿ ಇಲಾಖೆಯೇ ನಕಲಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
15 ತಿಂಗಳಲ್ಲಿ (2019ರ ಮೇ 2020ರ ಆಗಸ್ಟ್ವರೆಗೆ) ರಾಜ್ಯಾದ್ಯಂತ 94,885 ಎಎವೈ ಹಾಗೂ ಬಿಪಿಎಲ್ ಕಾರ್ಡ್ಗಳನ್ನು ಇಲಾಖೆ ರದ್ದುಪಡಿಸಿದೆ. ಸರ್ಕಾರಕ್ಕೆ ಅಂದಾಜು ಪ್ರತಿ ತಿಂಗಳು ಆರು ಕೋಟಿಗೂ ಹೆಚ್ಚಿನ ಹಣ ಉಳಿತಾಯವಾಗುತ್ತಿರುವುದು ಅಂಕಿ-ಅಂಶಗಳಿಂದ ಕಂಡುಬಂದಿದೆ. ಬಿಪಿಎಲ್ ಹಾಗೂ ಎಎವೈ ಪಡಿತರ ಚೀಟಿಗಳಿಗೆ ಸರಕಾರದಿಂದ ಸದ್ಯ ಉಚಿತವಾಗಿ ಪಡಿತರ ವಿತರಿಸಲಾಗುತ್ತದೆ, ಫಲಾನುಭವಿಗಳಿಗೆ ನೀಡುವ ಪ್ರತಿ ಕೆಜಿಗೆ ಸರಕಾರ 22-23 ರೂ. ವೆಚ್ಚ ಮಾಡುತ್ತಿದೆ. ಅದರಂತೆ 94 ಸಾವಿರ ಪಡಿತರ ಚೀಟಿಗಳಲ್ಲಿ ಸರಾಸರಿ ಮೂರು ಸದಸ್ಯರಂತೆ 2.82 ಲಕ್ಷ ಸದಸ್ಯರು ಇಷ್ಟು ದಿನ ಪಡಿತರ ಪಡೆಯುತ್ತಿದ್ದರು. ಅದರಂತೆ ಅಂದಾಜು 6 ಕೋಟಿಗೂ ಹೆಚ್ಚಿನ ಹಣ ಸರ್ಕಾರಕ್ಕೆ ಹೊರೆಯಾಗುತ್ತಿತ್ತು.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment