ಗಾಂಜಾ ಸಾಗಾಟದಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಭದ್ರಾವತಿ ನ್ಯೂಟೌನ್ ಪೊಲೀಸರು 1.30 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರದ ಕೂಲಿಬ್ಲಾಕ್ ಶೆಡ್ ನಿವಾಸಿಗಳಾದ ಡ್ಯಾನಿಯಲ್ ಅಲಿಯಾಸ್ ಡ್ಯಾನಿ, ಆದಿಲ್ ಬಾಷಾ, ಮತ್ತು ನ್ಯೂ ಕಾಲೋನಿ ನಿವಾಸಿ ಚರಣ ಅಲಿಯಾಸ್ ಕುರಚರಣರಾಜ್ ಯಾದವ್ ಬಂಧಿತರು.
ಪೊಲೀಸ್ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತು.