ಚಿತ್ರದುರ್ಗ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಸವನಬಾಗೇವಾಡಿಯ ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ
ಭಾನುವಾರ ಬೆಳಿಗ್ಗೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಈ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದುರಿ ಸಾಲವಡಗಿ ಗ್ರಾಮದವರಾಗಿದ್ದಾರೆ.
ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮದ್ದೂರಿನಲ್ಲಿ ಜೆಡಿಎಸ್ ಮುಖಂಡ ಅಪ್ಪು ಗೌಡನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಾಣಾಪಾಯದಿಂದ ಪಾರು
ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿವೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ನಸುಕಿನ ಜಾವ 3:30ಕ್ಕೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.
ಸ್ಥಳಕ್ಕೆ ಎಸ್ಪಿ ಪರುಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ : ಶಿವ ಯೋಗೇಶ್ವರ ಸ್ವಾಮೀಜಿ
- ಜನವರಿಯಲ್ಲಿ ಯುವ ನಿಧಿ – ಇಲ್ಲಿದೆ ಸಂಪೂರ್ಣ ಮಾಹಿತಿ
- ರೈಲ್ವೆ ಇಲಾಖೆಯಿಂದ 3000 ಕ್ಕೂ ಹೆಚ್ಚು ಹುದ್ದೆಗಳಿಗೆ ಪರೀಕ್ಷೆ, ಸಂದರ್ಶನವಿಲ್ಲದೇ ಆಯ್ಕೆ
- ಬೆಂಗಳೂರು ಸೇರಿದಂತೆ 41 ಕಡೆ NIA ದಾಳಿ
- ನಾ ನಿನ್ನ ಮರೆಯಲಾರೆ !
- ಹಿರಿಯ ನಟಿ ಲೀಲಾವತಿ ಇನ್ನಿಲ್ಲ
- ರಾಜ್ಯ ಸರ್ಕಾರದ ಬರ ಪರಿಹಾರ : ಇನ್ನೆರಡು ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆ: ಚೆಲುವರಾಯಸ್ವಾಮಿ
- ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಅರ್ಜುನ ಆನೆಯ ‘ಸ್ಮಾರಕ’ ನಿರ್ಮಾಣ – ಸಿಎಂ ಸಿದ್ಧರಾಮಯ್ಯ
- Rocking Star ಯಶ್ ನಟನೆಯ ‘ಟಾಕ್ಸಿಕ್ ’ ಸಿನಿಮಾ ಟೈಟಲ್ ರಿಲೀಸ್