ಮಂತ್ರಾಲಯ ರಾಘವೇಂದ್ರ ಸ್ವಾಮಿ ದರ್ಶನಕ್ಕೆ ಬಂದಿದ್ದ ಭಕ್ತರ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗ ಧಗ ಉರಿದು ಸುಟ್ಟು ಹೋದ ಘಟನೆ ರಾಯಚೂರಿನ ಮಡ್ಡಿಪೇಟೆಯಲ್ಲಿ ತಿಪ್ಪೆಯ ಬಳಿ ನಿಲ್ಲಿಸಿದ್ದಾಗ ನಡೆದಿದೆ.
ರೈತ ಮುಖಂಡ ಡಾ. ವಿಜಯಾನಂದ ಸ್ವಾಮಿ ಅವರಿಗೆ ಸೇರಿದ ಕಾರು ಬೆಳಗಿನ ಜಾವ ಬೆಂಕಿಗಾಹುತಿಯಾಗಿದೆ. ಇದನ್ನು ಓದಿ – ಬೀದರ್-ಬೆಂಗಳೂರು ಮಧ್ಯೆ ಸಂಚರಿಸಲಿದೆ ಏರ್ ವಿಮಾನ
ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಲು ಬೆಂಗಳೂರಿನಿಂದ ರಾಯಚೂರಿನ ಮಡ್ಡಿಪೇಟೆಯಲ್ಲಿರುವ ಸಹೋದರನ ಮನೆಗೆ ಬಂದಿದ್ದರು.
ಮನೆ ಹೊರಗೆ ಪಾರ್ಕ್ ಮಾಡಿದ್ದ ಕಾರು ಬೆಳಗಾಗುವಷ್ಟರಲ್ಲಿ ಸುಟ್ಟು ಕರಕಲಾಗಿದೆ. ತಿಪ್ಪೆಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಕಾರಿಗೆ ತಗುಲಿರಬಹುದು ಅಂತ ಶಂಕಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಅರ್ಧ ಗಂಟೆಕಾಲ ಬೆಂಕಿ ನಂದಿಸಿದೆ.
ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ