ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ.
ಆನಂದ್(35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು
ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಸಮೀಪದ ಕಾರೇಹಳ್ಳಿ ಮೂಲದವರು.
ಇಂದು ಬೆಳಗ್ಗೆ ಬೈಕಿನಲ್ಲಿ ಧರ್ಮಸ್ಥಳಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.
ಬೈಕ್-ಕಾರು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೈಕ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಕಂದಕಕ್ಕೆ ಬಿದ್ದ ಬೈಕಿಗೆ ಬೆಂಕಿ ಹೊತ್ತಿದ ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೈಕ್ ಜೊತೆಯೇ ಕಂದಕಕ್ಕೆ ಬಿದ್ದ ಬೈಕ್ ಸವಾರ ಆನಂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀವ್ರ ಗಾಯವಾಗಿದ್ದ ಮೃತ ಆನಂದ್ ಪತ್ನಿ ಲಕ್ಷ್ಮಿ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಕೂಡ ಸಾವನ್ನಪ್ಪಿದ್ದಾರೆ.
ಚಿಕ್ಕಮಗಳೂರಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು