ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು

Team Newsnap
1 Min Read

ಮಂಡ್ಯ: ಕೆಎಸ್​ಆರ್​ಟಿಸಿ ಬಸ್​ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್​ ಬಳಿ ಜರುಗಿದೆ.

ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ಬೆಂಗಳೂರಿನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿಕೃಷ್ಣ ಹಾಗೂ ಧಾರವಾಡದ ರಘುನಾಥ್ ಭಜಂತ್ರಿ ಎಂದು ಗುರುತಿಸಲಾಗಿದೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದ ಈ ಘಟನೆಯಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಶಿಫ್ಟ್ ಕಾರು, ಮುಂದೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ

ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a comment