crime

ಬೆಳ್ಳೂರು ಸಮೀಪ ಸಾರಿಗೆ ಬಸ್ ಗೆ ಕಾರು ಢಿಕ್ಕಿ : ನಾಲ್ವರ ಸಾವು

ಮಂಡ್ಯ: ಕೆಎಸ್​ಆರ್​ಟಿಸಿ ಬಸ್​ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್​ ಬಳಿ ಜರುಗಿದೆ.

ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ಬೆಂಗಳೂರಿನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿಕೃಷ್ಣ ಹಾಗೂ ಧಾರವಾಡದ ರಘುನಾಥ್ ಭಜಂತ್ರಿ ಎಂದು ಗುರುತಿಸಲಾಗಿದೆ.

ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದ ಈ ಘಟನೆಯಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಶಿಫ್ಟ್ ಕಾರು, ಮುಂದೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ

ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Team Newsnap
Leave a Comment

Recent Posts

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024