ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಕಳೆದ ಮಧ್ಯರಾತ್ರಿ ನಂತರ ಜರುಗಿದೆ.
ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ – ದೇವರಹೊಸಹಳ್ಳಿ ಗ್ರಾಮದ ಬಳಿ ಮೈಸೂರಿನ ಲೋಹಿತ್ ರಾವ್ ಹಾಗೂ ಸ್ನೇಹಿತರಿಗೆ ಸೇರಿದ ಹಣ ಹಾಗೂ ಚಿನ್ನಾಭರಣವನ್ನು ದೋಚಿದ್ದಾರೆ.
ಕಳೆದ ಮಧ್ಯರಾತ್ರಿ ನಂತರ ಕಾರು ಕೆಟ್ಟ ನಿಂತಿತ್ತು. ಟೋಯಿಂಗ್ ವಾಹನಕ್ಕಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ದರೋಡೆ ಕಾರು ಗ್ಲಾಸ್ ಒಡೆದು ಚಾಕು ತೋರಿಸಿ ದರೋಡೆ ಮಾಡಿದ್ದಾರೆ.
ಚನ್ನಪಟ್ಟಣ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಇದನ್ನು ಓದಿ –ರಾಜ್ಯದಲ್ಲಿ 242 ಲೆಕ್ಕ ಸಹಾಯಕ ಹುದ್ದೆ ಅರ್ಜಿ ಆಹ್ವಾನ – ವಿವರಕ್ಕೆ PDF ನೋಡಿ