ಜಾತಿ ಬಹಳ ಮುಖ್ಯ ಎಂಬುದನ್ನು ಕಂದಾಯ ಸಚಿವ ಆರ್.ಅಶೋಕ್ ತಮ್ಮನ್ನೇ ಉದಾಹರಣೆಯನ್ನಾಗಿಸಿಕೊಂಡು ಸಮರ್ಥನೆ ಮಾಡಿಕೊಂಡಿದ್ದಾರೆ.
ಹಾಸನ ಜಿಲ್ಲಾ ಒಕ್ಕಲಿಗರ ಸಂಘದ ನೂತನ ಸಮುದಾಯ ಭವನದ ಶಿಲಾನ್ಯಾಸ ಸಮಾರಂಭದಲ್ಲಿ ಸಚಿವರು ಮಾತನಾಡಿದರು. ನಾನು ಅಶೋಕ ಎಂದು ಮಂತ್ರಿ ಮಾಡಿಲ್ಲ. ಈ ಸಮುದಾಯದಿಂದ ಬಂದಿದ್ದೇನೆ ಎಂದು ಸಚಿವನನ್ನಾಗಿ ಮಾಡಲಾಗಿದೆ ಎಂದರು.
ಈ ಸಮುದಾಯದಿಂದ ಬಂದದ್ದಕ್ಕೆ ನನಗೆ ಹೆಮ್ಮೆ ಇದೆ. ಈ ಸಮುದಾಯ ಬೆಳೆದರೆ ನಾವು ಬೆಳೆಯುತ್ತೇವೆ ಎಂದು ಹೇಳಿದರು. ಅಧಿಕಾರ ಎಂಬುದು ನೀರಿನ ಮೇಲಿನ ಗುಳ್ಳೆಯಂತೆ ಎಂದು ವೇದಾಂತಿಯಂತೆ ಮಾತನಾಡಿದ ಕಂದಾಯ ಸಚಿವರು, ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದಾಗ ಹಿಂದೆ 10 ಕಾರು, ಮುಂದೆ 10 ಕಾರಿತ್ತು. ಆದರೆ ಹೋಗುವಾಗ ಅವರು (ಧರ್ಮಸಿಂಗ್) ಒಬ್ಬರೇ ಹೋದರು. ಆದ್ದರಿಂದ ಅಧಿಕಾರ ಶಾಶ್ವತವಲ್ಲ. ಮಾಡಿರುವ ಕೆಲಸಗಳಷ್ಟೇ ಶಾಶ್ವತ. ಸಮಾಜಮುಖಿ ಕಾರ್ಯಗಳನ್ನು ಮಾಡಬೇಕೆಂದು ಅಭಿಪ್ರಾಯಪಟ್ಟರು.
ಆದಿಚುಂಚನಗಿರಿ ಮಠ ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
This website uses cookies.
Leave a Comment