Main News

ಚುನಾವಣೆಯ ಗೆಲುವಿಗೆ ಜಾತಿ ಸಹಕಾರಿ‌ ಅಲ್ಲ‌- ದೇವೇಗೌಡ

ಒಂದು ಜಾತಿಯಿಂದ ಯಾರೂ ಕರ್ನಾಟಕದಲ್ಲಿ ಗೆಲ್ಲೋದಕ್ಕೆ ಆಗೋದಿಲ್ಲ. ಎಷ್ಟೇ ಪ್ರಭಾವಿ ಆಗಿದ್ದರೂ ಒಂದು ಜಾತಿಯಿಂದ ಗೆಲುವು ಅಸಾಧ್ಯ. ಜೆಡಿಎಸ್​ ಪಕ್ಷವನ್ನು ಯಾರೇ ಬಂದರೂ ತುಳಿಯಲು ಆಗುವುದಿಲ್ಲ ಎಂದು ರಾಜ್ಯಸಭಾ ಸದಸ್ಯ, ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಹೇಳಿದರು.

ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು,
ಆರ್.ಆರ್. ನಗರದಲ್ಲಿ ಡಿಕೆ ಶಿವಕುಮಾರ್ ಅವರಿಂದ ಜಾತಿ ರಾಜಕಾರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಒಂದು ಜಾತಿಯಿಂದ ಯಾರೂ ಕರ್ನಾಟಕದಲ್ಲಿ ಗೆಲ್ಲೋದಕ್ಕೆ ಆಗೋದಿಲ್ಲ. ಎಷ್ಟೇ ಪ್ರಭಾವಿ ಆಗಿದ್ದರೂ ಒಂದು ಜಾತಿಯಿಂದ ಗೆಲುವು ಅಸಾಧ್ಯ. ಇದನ್ನು ನಾನು ಸಾವಿರ ಬಾರಿ ಹೇಳಿದ್ದೇನೆ ಎಂದರು.

ನಮ್ಮ ಪಕ್ಷವನ್ನು ಯಾರಾದರೂ ಒಡೆಯುತ್ತಾರೆ ಎಂದರೆ ಅದು ಅವರ ಭ್ರಮೆ. ಯಾವುದೇ ಕಾರಣಕ್ಕೂ ನಮ್ಮ ಪಕ್ಷವನ್ನು ಒಡೆಯಲು ಸಾಧ್ಯವಿಲ್ಲ. ಜೆಡಿಎಸ್​ ಪಕ್ಷವನ್ನು ಯಾರೇ ಬಂದರೂ ತುಳಿಯಲು ಆಗುವುದಿಲ್ಲ. ಯಾರು ಏನು ಬೇಕಾದರೂ ಹೇಳಲಿ. ನಮ್ಮ ‌ಪಕ್ಷ ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ ಎಂದರು.

ದೇಶದಲ್ಲಿ ಮುಸ್ಲಿಂ ಮೀಸಲಾತಿ, ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು, ಸಾಮಾಜಿಕ ನ್ಯಾಯದ ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ. ನನ್ನ ಹೆಸರಲ್ಲಿ ಗೌಡ ಅಂತ ಸೇರಿಕೊಂಡಿದೆ. ಹಾಗಂತ ನಿಂದನೆ ಮಾಡೋದು ಸರಿಯಾ?  ನಿಂದಕರಿರಬೇಕಯ್ಯ ಅಂತ ಬಸವಣ್ಣನವರು ಹೇಳಿದ್ದಾರೆ. ನಿಂದನೆ ಮಾಡಿದ್ದಕ್ಕೆ ಅವರೇ ಅನುಭವಿಸುತ್ತಾರೆ ಬಿಡಿ. ಅವರು ಚುನಾವಣೆಯಲ್ಲಿ ಗೆಲ್ಲೋಕೆ, ಅವರ ಅಭ್ಯರ್ಥಿ ಗೆಲ್ಲಿಸೋಕೆ ಯಾವ ಪ್ರಯೋಗ ಮಾಡ್ತಾರೋ ಮಾಡಲಿ. ಅದಕ್ಕೆ ಅವರು ಸ್ವತಂತ್ರರು ಎಂದು ಡಿ.ಕೆ. ಶಿವಕುಮಾರ್ ವಿರುದ್ದ ದೇವೇಗೌಡ ಆಕ್ರೋಶ ಹೊರಹಾಕಿದ್ದಾರೆ.

ನಮ್ಮದು ಪ್ಯಾಮಿಲಿ ಪಾರ್ಟಿ ಅಲ್ಲ

ನಮ್ಮದು ಫ್ಯಾಮಿಲಿ ಪಕ್ಷವಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ದ ಹೋರಾಟ ಮಾಡಿದ್ದೇನೆ, ಮುಂದೆಯೂ ಮಾಡುತ್ತೇನೆ. ಈ ಪಕ್ಷ ಬಡವರ ಪರ, ರೈತರು, ಅತ್ಯಂತ ಕೆಳ ವರ್ಗದಲ್ಲಿ ಇರುವವರ ಪರವಾದ ಪಕ್ಷ. ಈಗಿನ ಸರ್ಕಾರ ಬಡವರ ಪರ, ರೈತ ಪರ ಇಲ್ಲ ಎಂದು ದೇವೇಗೌಡ ಕಿಡಿಕಾರಿದರು.

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆಯು ನಡೆಯಲಿದೆ. ಬುಧವಾರ ನಮ್ಮ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ. ಸೋಲು, ಗೆಲುವು ಆಮೇಲೆ. ಪಕ್ಷಕ್ಕೆ ನಿಷ್ಠರಾಗಿರುವವರಿಗೆ ಟಿಕೆಟ್ ನೀಡಲಾಗುವುದು. ಹೊರಗಿನವರಿಗೆ ಟಿಕೆಟ್ ಕೊಟ್ಟು ಸಾಕಾಗಿ ಹೋಗಿದೆ. ಅವರು ಹೀಗೆ ಬಂದು ಹಾಗೆ ಹೋಗಿರೋದನ್ನು ನೋಡಿದ್ದೇವೆ. ಅದೊಂದು ಹಿಂಸೆ. ನಮಗೆ ಆಯಾ ರಾಮ್, ಗಯಾ ರಾಮ್ ರೀತಿಯವರು ಬೇಕಾಗಿಲ್ಲ. ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡುತ್ತಾರೆ ಎಂದಷ್ಟೇ ಹೇಳಿದರು.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024