August 3, 2025

Newsnap Kannada

The World at your finger tips!

sidda

ಚುನಾವಣೆಯಲ್ಲಿ ಜಾತಿ ರಾಜಕಾರಣ ವಕ್೯ ಔಟ್ ಆಗಲ್ಲ – ಸಿದ್ದರಾಮಯ್ಯ

Spread the love

ಜಾತಿ ರಾಜಕಾರಣ ಚುನಾವಣೆಯಲ್ಲಿ ವಕ್೯ ಔಟ್ ಆಗುವುದಿಲ್ಲ. ಜಾತಿ ಬಲ ನಡೆಯುವುದಿದ್ದರೆ, ಮಂಡ್ಯದವರು ಎಚ್​ ಡಿ ಕುಮಾರಸ್ವಾಮಿ ಮಗನನ್ನು ಯಾಕೆ ಸೋಲಿಸಿದರು. ತುಮಕೂರಿನಲ್ಲಿ ದೇವೆಗೌಡರು ಯಾಕೆ ಸೋತರು ಎಂದು ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್​ ಜಾತಿ ರಾಜಕಾರಣ ಮಾಡಲು ಹೊರಟಿದೆ. ಡಿಕೆ ಶಿವಕುಮಾರ್​ಗೆ ಜಾತಿ ರಾಜಕಾರಣ ಮಾಡುವಂತೆ ಹೇಳಿಕೊಟ್ಟವರು ಯಾರು ಎಂಬುದು ಗೊತ್ತಿದೆ ಎಂಬ ಎಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಜಾತಿ ಕಾರ್ಡ್​ ಎಲ್ಲಾ ನಡೆಯಲ್ಲ. ಅಲ್ಲದೇ ಯಾವ ಜಾತಿಯೂ ಒಬ್ಬರ ಹಿಂದೆ ಹೋಗಲ್ಲ. ಒಕ್ಕಲಿಗರೆಲ್ಲಾ ಕುಮಾರಸ್ವಾಮಿ ಜೊತೆ ಹೋಗಲ್ಲ ಎಂದು ತಿಳಿಸಿದರು.

ಉಪ ಚುನಾವಣಾ  ಪ್ರತಿ ವಾರ್ಡ್ ನಿಂದ ಒಂದೊಂದು ಟೀಮ್ ಮಾಡಲಾಗಿದೆ.  ಪ್ರತಿ ಬೂತ್ ಗೂ ಜವಾಬ್ದಾರಿ ನೀಡಲಾಗಿದೆ. ಶಾಸಕರು, ಮಾಜಿ ಸಚಿವರು ಪ್ರತಿ ಟೀಮ್ ನಲ್ಲಿ ಇರಲಿದ್ದಾರೆ. ಈ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ತಿಳಿಸಿದರು.

ಬಿಜೆಪಿಯಲ್ಲಿ ಸಂಘರ್ಷ

ಇದೇ ವೇಳೆ ಬಿಜೆಪಿ ಅಭ್ಯರ್ಥಿ ಆಯ್ಕೆ ಮಾಡದಿರುವುದರ ಕುರಿತು ಟೀಕಿಸಿದ ಅವರು, ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿ ಅಭ್ಯರ್ಥಿಗಳನ್ನು ಒಪ್ಪಲು ಸ್ಥಳೀಯ ಜನರಿಗೆ ಇಷ್ಟ ಇಲ್ಲ. ಹಾಗಾಗಿ ಅವರ ಪಕ್ಷದಲ್ಲಿ ಮೂಲ ಮತ್ತು ವಲಸಿಗರ ಸಂಘರ್ಷ ನಡೆಯುತ್ತಿದೆ.  ಇನ್ನು  ಜೆಡಿಎಸ್​ನಲ್ಲಿ ಅಭ್ಯರ್ಥಿಯೇ ಇಲ್ಲ ಎಂದು ಇದೇ ವೇಳೆ ಟೀಕಿಸಿದರು.

error: Content is protected !!