ಜಾತಿ ರಾಜಕಾರಣ ಚುನಾವಣೆಯಲ್ಲಿ ವಕ್೯ ಔಟ್ ಆಗುವುದಿಲ್ಲ. ಜಾತಿ ಬಲ ನಡೆಯುವುದಿದ್ದರೆ, ಮಂಡ್ಯದವರು ಎಚ್ ಡಿ ಕುಮಾರಸ್ವಾಮಿ ಮಗನನ್ನು ಯಾಕೆ ಸೋಲಿಸಿದರು. ತುಮಕೂರಿನಲ್ಲಿ ದೇವೆಗೌಡರು ಯಾಕೆ ಸೋತರು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಾತಿ ರಾಜಕಾರಣ ಮಾಡಲು ಹೊರಟಿದೆ. ಡಿಕೆ ಶಿವಕುಮಾರ್ಗೆ ಜಾತಿ ರಾಜಕಾರಣ ಮಾಡುವಂತೆ ಹೇಳಿಕೊಟ್ಟವರು ಯಾರು ಎಂಬುದು ಗೊತ್ತಿದೆ ಎಂಬ ಎಚ್ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ಜಾತಿ ಕಾರ್ಡ್ ಎಲ್ಲಾ ನಡೆಯಲ್ಲ. ಅಲ್ಲದೇ ಯಾವ ಜಾತಿಯೂ ಒಬ್ಬರ ಹಿಂದೆ ಹೋಗಲ್ಲ. ಒಕ್ಕಲಿಗರೆಲ್ಲಾ ಕುಮಾರಸ್ವಾಮಿ ಜೊತೆ ಹೋಗಲ್ಲ ಎಂದು ತಿಳಿಸಿದರು.
ಉಪ ಚುನಾವಣಾ ಪ್ರತಿ ವಾರ್ಡ್ ನಿಂದ ಒಂದೊಂದು ಟೀಮ್ ಮಾಡಲಾಗಿದೆ. ಪ್ರತಿ ಬೂತ್ ಗೂ ಜವಾಬ್ದಾರಿ ನೀಡಲಾಗಿದೆ. ಶಾಸಕರು, ಮಾಜಿ ಸಚಿವರು ಪ್ರತಿ ಟೀಮ್ ನಲ್ಲಿ ಇರಲಿದ್ದಾರೆ. ಈ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಕೆಲಸ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಬಿಜೆಪಿ ಅಭ್ಯರ್ಥಿ ಆಯ್ಕೆ ಮಾಡದಿರುವುದರ ಕುರಿತು ಟೀಕಿಸಿದ ಅವರು, ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿ ಅಭ್ಯರ್ಥಿಗಳನ್ನು ಒಪ್ಪಲು ಸ್ಥಳೀಯ ಜನರಿಗೆ ಇಷ್ಟ ಇಲ್ಲ. ಹಾಗಾಗಿ ಅವರ ಪಕ್ಷದಲ್ಲಿ ಮೂಲ ಮತ್ತು ವಲಸಿಗರ ಸಂಘರ್ಷ ನಡೆಯುತ್ತಿದೆ. ಇನ್ನು ಜೆಡಿಎಸ್ನಲ್ಲಿ ಅಭ್ಯರ್ಥಿಯೇ ಇಲ್ಲ ಎಂದು ಇದೇ ವೇಳೆ ಟೀಕಿಸಿದರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment