ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಮಂಡ್ಯದಲ್ಲಿ ರೈತರ ಪ್ರತಿಭಟನೆಗಳು ತೀವ್ರವಾಗಿ ನಡೆಯುತ್ತಿವೆ. ಪ್ರತಿಭಟನೆಗೆ ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳು ಜೊತೆಗೂಡಿದ್ದು, ಆದಿಚುಂಚನಗಿರಿ ಮಠವು ಸದಾ ರೈತರ ಜೊತೆ ಸದಾ ಇರುತ್ತದೆ ಎಂದು ತಿಳಿಸಿದರು.
ರೈತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳ ವತಿಯಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಪ್ರತಿಭಟನೆಗೆ ಆಗಮಿಸಿದ ನಿರ್ಮಲಾನಂದನಾಥ ಶ್ರೀ ಕಾವೇರಿ ಪರ ಹೋರಾಟಕ್ಕೆ ಬೆಂಬಲ ನೀಡಿದರು.
ಸಂಕಷ್ಟದ ಸ್ಥಿತಿ ಕುರಿತು ಕೇಂದ್ರ ಸಚಿವರಿಗೂ ಮನವರಿಕೆ ಮಾಡಬೇಕು.ನಾವು ಕೂಡ ರಾಜ್ಯ ಹಾಗೂ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇವೆ. ಈ ಮೂಲಕ ರೈತರಿಗೆ ಅನುಕೂಲ ಕಲ್ಪಿಸಲಿ.ರೈತರ ಪರವಾಗಿ ಆದಿಚುಂಚನಗಿರಿ ಮಠ ಸದಾ ನಿಮ್ಮ ಜೊತೆಗೆ ಇರುತ್ತದೆ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟವನ್ನು ಮುಂದುವರಿಸಲಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ ಹೋರಾಟ ಮುಂದುವರೆಸಲಿ ಎಂದು ನಿರ್ಮಲಾನಂದನಾಥ ಶ್ರೀ ಹೇಳಿದರು.
ಹಲವಾರು ದಶಕಗಳಿಂದ ಕಾವೇರಿ ಸಮಸ್ಯೆ ಹಾಗೇ ಉಳಿದಿದೆ. ಆದ್ಯತೆ ಮೇರೆಗೆ ಕುಡಿಯುವ ನೀರು ಕೊಡಬೇಕು. ಅನಂತರ ವ್ಯವಸಾಯಕ್ಕೆ, ಬಳಿಕ ಕೈಗಾರಿಕಾ ಮತ್ತು ಇತರೆ ಬಳಕೆಗೆ ಕೊಡಬೇಕು. ತಮಿಳುನಾಡಿಗೆ 419 TMC ನೀರು ಪ್ರತಿವರ್ಷ ಕೊಡಲಾಗುತ್ತೆ. ಕರ್ನಾಟಕಕ್ಕೆ ಪ್ರತಿವರ್ಷ 270 TMC ನಿಗದಿ ಮಾಡಲಾಗಿದೆ. ಆದರೆ ಮಳೆ ಕಡಿಮೆ ಆದ ಸಂದರ್ಭದಲ್ಲಿ ಸಂಕಷ್ಟ ಸೂತ್ರ ರಚಿಸಬೇಕಿತ್ತು ಎಂದು ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು