Main News

ಡಿಕೆಶಿಗೆ ಸಮನ್ಸ್ ಜಾರಿ ಮಾಡಿದ ಸಿಬಿಐ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇನ್ನು 2 ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ನಿನ್ನೆ ಡಿಕೆಶಿ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು.

ಆದಾಯಕ್ಕೂ ಮೀರಿ ತಮ್ಮ ಕುಟುಂಬದ ಹೆಸರಿನಲ್ಲಿ 74.97 ಕೋಟಿ ಆಸ್ತಿ ಗಳಿಕೆ ಮಾಡಿದ ಆರೋಪ ದ ಮೇಲೆ ನಿನ್ನೆ ಬೆಳ್ಳಂಬೆಳಿಗ್ಗೆ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸದಾಶಿವನಗರದ ಮನೆ, ಕನಕಪುರ, ದೆಹಲಿ, ಮುಂಬೈ ಸೇರಿದಂತೆ ಒಟ್ಟು 14 ಭಾಗಗಳಲ್ಲಿ
ದಾಳಿ ಮಾಡಿದ್ದರು.

ಐಟಿ ಹಾಗೂ ಇಡಿ ದಾಳಿ ನಂತರ ಡಿಕೆಶಿ ಅವರ ಮನೆಯ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು 50 ಲಕ್ಷ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದರು. ಮುಂಬರುವ ಉಪಚುಣವಣೆಗಳಿಗೆ ಶೇಖರಿಸಿಟ್ಟಿದ್ದ ಹಣವೇ? ಅದು ಎಂಬ ಅನುಮಾನಗಳು ವ್ಯಕ್ತವಾಗಿದ್ದವು. ಅಲ್ಲದೇ ವಶ ಮಾಡಿಕೊಂಡ ಹಣಕ್ಕೆ ಯಾವುದೇ ದಾಖಲೆಗಳು ಸಹ ಲಭ್ಯವಾಗಿರಲಿಲ್ಲ. ಹಣದ
ಜೊತೆಗೆ ಹಲವು ದಾಖಲೆಗಳು, ಪುತ್ರಿಯ ಮದುವೆಗೆಂದು ತೆಗೆದಿಟ್ಟಿದ್ದ ಚಿನ್ನಭರಣಗಳನ್ನು
ಅಧಿಕಾರಿಗಳು ವಶ ಮಾಡಿಕೊಂಡಿದ್ದರು. 2004ನೇ ಇಸ್ವಿಯಲ್ಲಿ 7 ಕೋಟಿಯಿದ್ದ ಡಿಕೆಶಿ ಅವರ ಆಸ್ತಿ 2018ರ ವೇಳೆಗೆ 800 ಕೋಟಿ ರೂಗಳಾಗಿತ್ತು. ಬಹಳ ದಿನದಿಂದ ಡಿಕೆಶಿ ಮೇಲೆ ಕಣ್ಣಿರಿಸಿದ್ದ ಸಿಬಿಐ ನಿನ್ನೆ ದಾಳಿ ನಡೆಸಿದೆ. ಆದರೆ
ವಿರೋಧ ಪಕ್ಷವಾದ ಕಾಂಗ್ರೆಸ್ ಉಪಚುಣಾವಣೆಯ ಸಂದರ್ಭದಲ್ಲಿ ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದು
ಆಪಾದನೆ ಮಾಡಿವೆ. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ಡಿಕೆಶಿ ತಪ್ಪು ಮಾಡದಿದ್ದರೆ ತನಿಖೆ ಎದುರಿಸಲು ಏಕೆ ಭಯ ಎಂದು ಕೇಳಿವೆ.

Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024