ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಆದರೆ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳನ್ನು ಹೇಗೆ ಪಾಸ್ ಮಾಡಬೇಕು ಎಂಬ ಮಾಹಿತಿ ಇಲ್ಲಿದೆ.
ಪ್ರತಿವರ್ಷ ಸುಮಾರು 21.5 ಲಕ್ಷ ವಿದ್ಯಾರ್ಥಿಗಳು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗೆ ಹಾಜರಾಗುತ್ತಾರೆ. ಈಗ ವಿದ್ಯಾರ್ಥಿಗಳಿಗೆ ಯಾವುದೇ ಬೋರ್ಡ್ ಪರೀಕ್ಷೆಗಳು ಇರುವುದಿಲ್ಲ. ಆದರೂ ಅವರಿಗೆ ವಿಶೇಷ ಮಾನದಂಡದ ಆಧಾರದ ಮೇಲೆ ಮುಂದಿನ ತರಗತಿಗೆ ಬಡ್ತಿ ನೀಡಲಾಗುತ್ತದೆ.
ವಸ್ತುನಿಷ್ಠ ಮಾನದಂಡ ಎಂದು ಸಿಬಿಎಸ್ಸಿ ಮಂಡಳಿ ಹೇಳಿಕೊಂಡರೂ, ನಿಖರವಾದ ಮಾನದಂಡ ಯಾವುದು ಎಂಬ ವಿವರಗಳನ್ನು ಮಂಡಳಿ ಇನ್ನು ಬಹಿರಂಗಪಡಿಸಿಲ್ಲ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ನೀಡಿರುವ ಮಾಹಿತಿಯಂತೆ, 10 ನೇ ತರಗತಿ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಉತ್ತೀರ್ಣರಾಗುತ್ತಾರೆ ಎಂದು ಹೇಳಲಾಗಿದೆ.
ಮೂರು ಅಥವಾ ಹೆಚ್ಚಿನ ಪತ್ರಿಕೆಗಳಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಅವರು ಹಾಜರಾದ ಯಾವುದೇ ಮೂರು ವಿಷಯದಲ್ಲಿ ಪಡೆದ ಅತಿ ಹೆಚ್ಚು ಅಂಕಗಳ ಆಧಾರದ ಮೇಲೆ ಅಂಕಗಳನ್ನು ನೀಡಲಾಗಿದೆ. ಕೇವಲ ಎರಡು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಅತಿಹೆಚ್ಚು ಅಂಕಗಳಿಸಿದ ಎರಡು ಪರೀಕ್ಷೆಗಳ ಸರಾಸರಿಯನ್ನು ಪರಿಗಣಿಸಲಾಗುವುದು ಹಾಗೂ ಅವುಗಳ ಆಧಾರದ ಮೇಲೆ ಅಂಕ ನೀಡಲಾಗಿದೆ.
ಆಂತರಿಕ ಅಥವಾ ಪ್ರಾಯೋಗಿಕ ಅಥವಾ ಯೋಜನೆ ಆಧಾರಿತ ಮೌಲ್ಯಮಾಪನದಲ್ಲಿನ ಸಾಧನೆಯ ಆಧಾರದ ಮೇಲೆ ವಿದ್ಯಾರ್ಥಿಗಳ ಫಲಿತಾಂಶವನ್ನು ಲೆಕ್ಕ ಹಾಕಲಾಗಿದೆ. ವಿಶೇಷವಾಗಿ ಎರಡು ಪತ್ರಿಕೆಗಳಿಗಿಂತ ಕಡಿಮೆ ಪರೀಕ್ಷೆಗೆ ಹಾಜರಾದವರಿಗೆ ಪ್ರಾಯೋಗಿಕ ಪರೀಕ್ಷೆಗಳನ್ನು ಮಂಡಳಿಯು ಈಗಾಗಲೇ ಪರಿಗಣಿಸಿದೆ. ಇದೇ ಮಾದರಿ ಫಲಿತಾಂಶಕ್ಕೆ ಅನುಸರಿಸಲಾಗುತ್ತದೆ.
ಈ ಆಧಾರದ ಮೇಲೆ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಗೆ ನಿಗದಿಪಡಿಸಿದ ಅಂಕಗಳಿಂದ ತೃಪ್ತರಾಗದ ಯಾವುದೇ ಅಭ್ಯರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪರಿಸ್ಥಿತಿ ಅನುಕೂಲಕರವಾದ ಸಂದರ್ಭದಲ್ಲಿ ಪರೀಕ್ಷೆ ನಡೆಸಲಿದೆ, ಮಂಡಳಿ ನೀಡಿದ ಅಂಕಕ್ಕೆ ತೃಪ್ತರಾಗದ ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆಯಬಹುದು ಎಂದು ಹೇಳಲಾಗಿದೆ.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment