‘ಮುಂಗಾರು ಮಳೆ 2’ ಚಿತ್ರದಲ್ಲಿ ನಾಯಕಿ ನೇಹಾ ಶೆಟ್ಟಿ ತಂದೆ ಹರಿರಾಜ್ ಶೆಟ್ಟಿಯನ್ನು ಜೂಜು ಅಡ್ಡೆ ನಡೆಸುತ್ತಿದ್ದ ಕಾರಣಕ್ಕೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಗೂಂಡಾ ಕಾಯ್ದೆಯಡಿ ಹರಿರಾಜ್ ಶೆಟ್ಟಿಯನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ, ಪೊಲೀಸರು ನನ್ನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಕೋರ್ಟ್ನಲ್ಲಿ ದೂರಿದ್ದರು. ನಂತರ ಕೋರ್ಟ್ನಲ್ಲಿ ತಡೆಯಾಜ್ಞೆ ಪಡೆದು ಜೈಲಿನಿಂದ ಹೊರ ಬಂದಿದ್ದರು.
ಈಗ ಗೂಂಡಾ ಕಾಯ್ದೆ ತಡೆ ತೆರವಿಗೆ ಸಿಸಿಬಿ ಮನವಿ ಮಾಡಿತ್ತು.ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ ಬಳಿಕ ಮತ್ತೆ ಆರೋಪಿ ಹರಿರಾಜ್ ಬಂಧಿಸಿ ಜೈಲಿಗೆ ಕರೆದೊಯ್ಯಲಾಗಿದೆ.
ರಿಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಅವರು ಜೂಜು ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಹರಿರಾಜ್ ಮೇಲೆ 19 ಕೇಸ್ಗಳು ದಾಖಲಾಗಿವೆ.
ಕೋರಮಂಗಲ, ಕಬ್ಬನ್ ಪಾರ್ಕ್, ಅಶೋಕ ನಗರ, ಬಸವೇಶ್ವರ ನಗರ, ಸೇರಿ ಹಲವು ಪೊಲೀಸ್ ಠಾಣೆಗೆ ಇವರು ಬೇಕಾಗಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ